ಟೆಕ್‌

ಹೊಸ ವರ್ಷಕ್ಕೆ ಜಿಯೋ ಧಮಾಕಾ ಆಫರ್:‌ 200 ದಿನ ಅನಿಯಮಿತ 5g

ಮುಂಬೈ: ಭಾರತದ ದೂರ ಸಂಪರ್ಕ (ಟೆಲಿಕಾಂ) ಕ್ಷೇತ್ರದ ದೈತ್ಯ ಜಿಯೋ ಕಂಪನಿ ಹೊಸ ವರ್ಷಕ್ಕೆ ಹೊಸ ಪ್ರಿಪೇಯ್ಡ್‌ ಯೋಜನೆ ಜಾರಿ ಮಾಡುವ ಮೂಲಕ ಬಳಕೆದಾದರಿಗೆ ಬಂಪರ್‌ ಉಡುಗೊರೆ ನೀಡಿದೆ.

ತನ್ನ ಬಳಕೆದಾರರನ್ನು ಹೆಚ್ಚಿಸುವ ಜೊತೆಗೆ ಈಗಿರುವ ಬಳಕೆದಾರರಿಗೆ ಕಂಪನಿ ಹೊಸ ಆಫರ್‌ ನೀಡಿದೆ. ಈ ಯೋಜನೆಯಲ್ಲಿ ಜಿಯೋ ಬಳಕೆದಾರರು ಅನಿಯಮಿತ ಧ್ವನಿ ಕರೆ ಮತ್ತು ಎಸ್‌ಎಂಎಸ್‌ ಸೇವೆ ಪಡೆಯಬಹುದು.

ಜಿಯೋ ಎಂದಿನಂತೆ ಈ ಬಾರಿಯು ವರ್ಷದ ಅಂತ್ಯದಲ್ಲಿ ಹೊಸ ಆಫರ್‌ ಬಿಡುಗಡೆ ಮಾಡಿದೆ. ತಮ್ಮ ಚಂದದಾರರಿಗೆ 2,150ರವರೆಗೆ ಈ ಯೋಜನೆಯಲ್ಲಿ ಪ್ರಯೋಜನ ನೀಡಲಾಗಿದ್ದು, ಶಾಪಿಂಗ್‌ ಸೈಟ್‌ ರಿಯಾಯಿತಿ, ಆಹಾರ ವಿತರಣಾ ಅಪ್ಲಿಕೇಶನ್‌ಗಳು ಹಾಗೂ ಫ್ಲೈಟ್‌ ಬುಕಿಂಗ್‌ಗಳಿಗೂ ಪ್ರವೇಶ ನೀಡಿದೆ.

ಗ್ರಾಹಕರು ಜನವರಿ 11, 2025 ರೊಳಗೆ ಈ ಯೋಜನೆ ಖರೀದಿಸಿದರೆ ಮಾತ್ರ ಇದರ ಪ್ರಯೋಜನ ಪಡೆಯಬಹುದಾಗಿದೆ. ಇದರ ವ್ಯಾಲಿಡಿಟಿ 200 ದಿನಗಳವರೆಗೆ ಮಾತ್ರ ನೀಡಲಾಗಿದೆ.

ಈ ಯೋಜನೆ ಬಳಸುವ ಗ್ರಾಹಕರಿಗೆ ಅನಿಯಮಿತ ಕರೆ ಮತ್ತು SMS ಸೌಲಭ್ಯ ನೀಡಿದ್ದು, ಜೊತೆಗೆ 5G ಡೇಟಾ ಬೆಂಬಲವನ್ನು ನೀಡಲಾಗುತ್ತದೆ. ಅಲ್ಲದೇ, 500GB 4G ಡೇಟಾ ಅಥವಾ 2.5GB ದೈನಂದಿನ 4G ಡೇಟಾ ಸೌಲಭ್ಯ ನೀಡಲಾಗಿದೆ.

ಬಳಕೆದಾರರು ಕನಿಷ್ಠ 2500 ರೂ. ಗಳವರೆಗೆ ಹಣ ನೀಡಿ ಈ ಯೋಜನೆ ಖರೀದಿ ಮಾಡಿದರೆ ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕ್ಲೌಡ್‌ನ ಚಂದದಾರಿಕೆ ಪಡೆಯಬಹುದು. ಜೊತೆಗೆ 500 ರೂಪಾಯಿ ಮೌಲ್ಯದ Ajio ದ ಕೂಪನ್‌ ಕೂಡ ಇದೆ. ಬಳಕೆದಾರರು ಲಿಂಕ್‌ ಮೂಲಕ ಶಾಪಿಂಗ್‌ ಮಾಡಬಹುದು.

ಇನ್ನು ಸ್ವಿಗ್ಗಿಯಿಂದ ಆರ್ಡರ್‌ ಮಾಡಿದರೆ 150ರೂಪಾಯಿ ರಿಯಾಯಿತಿ ಸಿಗುತ್ತದೆ. ಆದರೆ ಅದಕ್ಕಾಗಿ ಕನಿಷ್ಠ 499 ರೂಪಾಯಿ ಆರ್ಡರ್‌ ಮಾಡಬೇಕು. EaseMyTrip ಮುಖಾಂತರ ನೀವು ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿದರೆ 1,500 ರೂ.ಗಳ ರಿಯಾಯಿತಿ ಪಡೆಯಬಹುದು ಎಂದು ಜಿಯೋ ಕಂಪನಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

11 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

11 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

11 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

11 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

12 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

12 hours ago