ಟೆಕ್‌

ಹೊಸ ವರ್ಷಕ್ಕೆ ಜಿಯೋ ಧಮಾಕಾ ಆಫರ್:‌ 200 ದಿನ ಅನಿಯಮಿತ 5g

ಮುಂಬೈ: ಭಾರತದ ದೂರ ಸಂಪರ್ಕ (ಟೆಲಿಕಾಂ) ಕ್ಷೇತ್ರದ ದೈತ್ಯ ಜಿಯೋ ಕಂಪನಿ ಹೊಸ ವರ್ಷಕ್ಕೆ ಹೊಸ ಪ್ರಿಪೇಯ್ಡ್‌ ಯೋಜನೆ ಜಾರಿ ಮಾಡುವ ಮೂಲಕ ಬಳಕೆದಾದರಿಗೆ ಬಂಪರ್‌ ಉಡುಗೊರೆ ನೀಡಿದೆ.

ತನ್ನ ಬಳಕೆದಾರರನ್ನು ಹೆಚ್ಚಿಸುವ ಜೊತೆಗೆ ಈಗಿರುವ ಬಳಕೆದಾರರಿಗೆ ಕಂಪನಿ ಹೊಸ ಆಫರ್‌ ನೀಡಿದೆ. ಈ ಯೋಜನೆಯಲ್ಲಿ ಜಿಯೋ ಬಳಕೆದಾರರು ಅನಿಯಮಿತ ಧ್ವನಿ ಕರೆ ಮತ್ತು ಎಸ್‌ಎಂಎಸ್‌ ಸೇವೆ ಪಡೆಯಬಹುದು.

ಜಿಯೋ ಎಂದಿನಂತೆ ಈ ಬಾರಿಯು ವರ್ಷದ ಅಂತ್ಯದಲ್ಲಿ ಹೊಸ ಆಫರ್‌ ಬಿಡುಗಡೆ ಮಾಡಿದೆ. ತಮ್ಮ ಚಂದದಾರರಿಗೆ 2,150ರವರೆಗೆ ಈ ಯೋಜನೆಯಲ್ಲಿ ಪ್ರಯೋಜನ ನೀಡಲಾಗಿದ್ದು, ಶಾಪಿಂಗ್‌ ಸೈಟ್‌ ರಿಯಾಯಿತಿ, ಆಹಾರ ವಿತರಣಾ ಅಪ್ಲಿಕೇಶನ್‌ಗಳು ಹಾಗೂ ಫ್ಲೈಟ್‌ ಬುಕಿಂಗ್‌ಗಳಿಗೂ ಪ್ರವೇಶ ನೀಡಿದೆ.

ಗ್ರಾಹಕರು ಜನವರಿ 11, 2025 ರೊಳಗೆ ಈ ಯೋಜನೆ ಖರೀದಿಸಿದರೆ ಮಾತ್ರ ಇದರ ಪ್ರಯೋಜನ ಪಡೆಯಬಹುದಾಗಿದೆ. ಇದರ ವ್ಯಾಲಿಡಿಟಿ 200 ದಿನಗಳವರೆಗೆ ಮಾತ್ರ ನೀಡಲಾಗಿದೆ.

ಈ ಯೋಜನೆ ಬಳಸುವ ಗ್ರಾಹಕರಿಗೆ ಅನಿಯಮಿತ ಕರೆ ಮತ್ತು SMS ಸೌಲಭ್ಯ ನೀಡಿದ್ದು, ಜೊತೆಗೆ 5G ಡೇಟಾ ಬೆಂಬಲವನ್ನು ನೀಡಲಾಗುತ್ತದೆ. ಅಲ್ಲದೇ, 500GB 4G ಡೇಟಾ ಅಥವಾ 2.5GB ದೈನಂದಿನ 4G ಡೇಟಾ ಸೌಲಭ್ಯ ನೀಡಲಾಗಿದೆ.

ಬಳಕೆದಾರರು ಕನಿಷ್ಠ 2500 ರೂ. ಗಳವರೆಗೆ ಹಣ ನೀಡಿ ಈ ಯೋಜನೆ ಖರೀದಿ ಮಾಡಿದರೆ ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕ್ಲೌಡ್‌ನ ಚಂದದಾರಿಕೆ ಪಡೆಯಬಹುದು. ಜೊತೆಗೆ 500 ರೂಪಾಯಿ ಮೌಲ್ಯದ Ajio ದ ಕೂಪನ್‌ ಕೂಡ ಇದೆ. ಬಳಕೆದಾರರು ಲಿಂಕ್‌ ಮೂಲಕ ಶಾಪಿಂಗ್‌ ಮಾಡಬಹುದು.

ಇನ್ನು ಸ್ವಿಗ್ಗಿಯಿಂದ ಆರ್ಡರ್‌ ಮಾಡಿದರೆ 150ರೂಪಾಯಿ ರಿಯಾಯಿತಿ ಸಿಗುತ್ತದೆ. ಆದರೆ ಅದಕ್ಕಾಗಿ ಕನಿಷ್ಠ 499 ರೂಪಾಯಿ ಆರ್ಡರ್‌ ಮಾಡಬೇಕು. EaseMyTrip ಮುಖಾಂತರ ನೀವು ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿದರೆ 1,500 ರೂ.ಗಳ ರಿಯಾಯಿತಿ ಪಡೆಯಬಹುದು ಎಂದು ಜಿಯೋ ಕಂಪನಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

24 mins ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

34 mins ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago