ಟೆಕ್‌

ಹೊಸ ವರ್ಷಕ್ಕೆ ಜಿಯೋ ಧಮಾಕಾ ಆಫರ್:‌ 200 ದಿನ ಅನಿಯಮಿತ 5g

ಮುಂಬೈ: ಭಾರತದ ದೂರ ಸಂಪರ್ಕ (ಟೆಲಿಕಾಂ) ಕ್ಷೇತ್ರದ ದೈತ್ಯ ಜಿಯೋ ಕಂಪನಿ ಹೊಸ ವರ್ಷಕ್ಕೆ ಹೊಸ ಪ್ರಿಪೇಯ್ಡ್‌ ಯೋಜನೆ ಜಾರಿ ಮಾಡುವ ಮೂಲಕ ಬಳಕೆದಾದರಿಗೆ ಬಂಪರ್‌ ಉಡುಗೊರೆ ನೀಡಿದೆ.

ತನ್ನ ಬಳಕೆದಾರರನ್ನು ಹೆಚ್ಚಿಸುವ ಜೊತೆಗೆ ಈಗಿರುವ ಬಳಕೆದಾರರಿಗೆ ಕಂಪನಿ ಹೊಸ ಆಫರ್‌ ನೀಡಿದೆ. ಈ ಯೋಜನೆಯಲ್ಲಿ ಜಿಯೋ ಬಳಕೆದಾರರು ಅನಿಯಮಿತ ಧ್ವನಿ ಕರೆ ಮತ್ತು ಎಸ್‌ಎಂಎಸ್‌ ಸೇವೆ ಪಡೆಯಬಹುದು.

ಜಿಯೋ ಎಂದಿನಂತೆ ಈ ಬಾರಿಯು ವರ್ಷದ ಅಂತ್ಯದಲ್ಲಿ ಹೊಸ ಆಫರ್‌ ಬಿಡುಗಡೆ ಮಾಡಿದೆ. ತಮ್ಮ ಚಂದದಾರರಿಗೆ 2,150ರವರೆಗೆ ಈ ಯೋಜನೆಯಲ್ಲಿ ಪ್ರಯೋಜನ ನೀಡಲಾಗಿದ್ದು, ಶಾಪಿಂಗ್‌ ಸೈಟ್‌ ರಿಯಾಯಿತಿ, ಆಹಾರ ವಿತರಣಾ ಅಪ್ಲಿಕೇಶನ್‌ಗಳು ಹಾಗೂ ಫ್ಲೈಟ್‌ ಬುಕಿಂಗ್‌ಗಳಿಗೂ ಪ್ರವೇಶ ನೀಡಿದೆ.

ಗ್ರಾಹಕರು ಜನವರಿ 11, 2025 ರೊಳಗೆ ಈ ಯೋಜನೆ ಖರೀದಿಸಿದರೆ ಮಾತ್ರ ಇದರ ಪ್ರಯೋಜನ ಪಡೆಯಬಹುದಾಗಿದೆ. ಇದರ ವ್ಯಾಲಿಡಿಟಿ 200 ದಿನಗಳವರೆಗೆ ಮಾತ್ರ ನೀಡಲಾಗಿದೆ.

ಈ ಯೋಜನೆ ಬಳಸುವ ಗ್ರಾಹಕರಿಗೆ ಅನಿಯಮಿತ ಕರೆ ಮತ್ತು SMS ಸೌಲಭ್ಯ ನೀಡಿದ್ದು, ಜೊತೆಗೆ 5G ಡೇಟಾ ಬೆಂಬಲವನ್ನು ನೀಡಲಾಗುತ್ತದೆ. ಅಲ್ಲದೇ, 500GB 4G ಡೇಟಾ ಅಥವಾ 2.5GB ದೈನಂದಿನ 4G ಡೇಟಾ ಸೌಲಭ್ಯ ನೀಡಲಾಗಿದೆ.

ಬಳಕೆದಾರರು ಕನಿಷ್ಠ 2500 ರೂ. ಗಳವರೆಗೆ ಹಣ ನೀಡಿ ಈ ಯೋಜನೆ ಖರೀದಿ ಮಾಡಿದರೆ ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕ್ಲೌಡ್‌ನ ಚಂದದಾರಿಕೆ ಪಡೆಯಬಹುದು. ಜೊತೆಗೆ 500 ರೂಪಾಯಿ ಮೌಲ್ಯದ Ajio ದ ಕೂಪನ್‌ ಕೂಡ ಇದೆ. ಬಳಕೆದಾರರು ಲಿಂಕ್‌ ಮೂಲಕ ಶಾಪಿಂಗ್‌ ಮಾಡಬಹುದು.

ಇನ್ನು ಸ್ವಿಗ್ಗಿಯಿಂದ ಆರ್ಡರ್‌ ಮಾಡಿದರೆ 150ರೂಪಾಯಿ ರಿಯಾಯಿತಿ ಸಿಗುತ್ತದೆ. ಆದರೆ ಅದಕ್ಕಾಗಿ ಕನಿಷ್ಠ 499 ರೂಪಾಯಿ ಆರ್ಡರ್‌ ಮಾಡಬೇಕು. EaseMyTrip ಮುಖಾಂತರ ನೀವು ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿದರೆ 1,500 ರೂ.ಗಳ ರಿಯಾಯಿತಿ ಪಡೆಯಬಹುದು ಎಂದು ಜಿಯೋ ಕಂಪನಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಏಪ್ರಿಲ್.‌5ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…

9 seconds ago

ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತಗೊಳಿಸಲು ಶ್ರಮಿಸಿ : ಎಡಿಸಿ ತಾಕೀತು

ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…

16 mins ago

ಆಟೋ ಗ್ಯಾಸ್‌ ಕೊರತೆ ; ವದಂತಿಗಳಿಗೆ ಕಿವಿಗೊಡದಂತೆ ಸಲಹೆ

ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…

24 mins ago

ಚಿಕ್ಕಮಗಳೂರು | ಚಾರಣಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿ ನಾಪತ್ತೆ ; ತೀವ್ರ ಹುಡುಕಾಟ

ಚಿಕ್ಕಮಗಳೂರು : ಬಾಬಾಬುಡನ್‌ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…

36 mins ago

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

1 hour ago

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

1 hour ago