ಟೆಕ್‌

ಹೊಸ ವರ್ಷಕ್ಕೆ ಜಿಯೋ ಧಮಾಕಾ ಆಫರ್:‌ 200 ದಿನ ಅನಿಯಮಿತ 5g

ಮುಂಬೈ: ಭಾರತದ ದೂರ ಸಂಪರ್ಕ (ಟೆಲಿಕಾಂ) ಕ್ಷೇತ್ರದ ದೈತ್ಯ ಜಿಯೋ ಕಂಪನಿ ಹೊಸ ವರ್ಷಕ್ಕೆ ಹೊಸ ಪ್ರಿಪೇಯ್ಡ್‌ ಯೋಜನೆ ಜಾರಿ ಮಾಡುವ ಮೂಲಕ ಬಳಕೆದಾದರಿಗೆ ಬಂಪರ್‌ ಉಡುಗೊರೆ ನೀಡಿದೆ.

ತನ್ನ ಬಳಕೆದಾರರನ್ನು ಹೆಚ್ಚಿಸುವ ಜೊತೆಗೆ ಈಗಿರುವ ಬಳಕೆದಾರರಿಗೆ ಕಂಪನಿ ಹೊಸ ಆಫರ್‌ ನೀಡಿದೆ. ಈ ಯೋಜನೆಯಲ್ಲಿ ಜಿಯೋ ಬಳಕೆದಾರರು ಅನಿಯಮಿತ ಧ್ವನಿ ಕರೆ ಮತ್ತು ಎಸ್‌ಎಂಎಸ್‌ ಸೇವೆ ಪಡೆಯಬಹುದು.

ಜಿಯೋ ಎಂದಿನಂತೆ ಈ ಬಾರಿಯು ವರ್ಷದ ಅಂತ್ಯದಲ್ಲಿ ಹೊಸ ಆಫರ್‌ ಬಿಡುಗಡೆ ಮಾಡಿದೆ. ತಮ್ಮ ಚಂದದಾರರಿಗೆ 2,150ರವರೆಗೆ ಈ ಯೋಜನೆಯಲ್ಲಿ ಪ್ರಯೋಜನ ನೀಡಲಾಗಿದ್ದು, ಶಾಪಿಂಗ್‌ ಸೈಟ್‌ ರಿಯಾಯಿತಿ, ಆಹಾರ ವಿತರಣಾ ಅಪ್ಲಿಕೇಶನ್‌ಗಳು ಹಾಗೂ ಫ್ಲೈಟ್‌ ಬುಕಿಂಗ್‌ಗಳಿಗೂ ಪ್ರವೇಶ ನೀಡಿದೆ.

ಗ್ರಾಹಕರು ಜನವರಿ 11, 2025 ರೊಳಗೆ ಈ ಯೋಜನೆ ಖರೀದಿಸಿದರೆ ಮಾತ್ರ ಇದರ ಪ್ರಯೋಜನ ಪಡೆಯಬಹುದಾಗಿದೆ. ಇದರ ವ್ಯಾಲಿಡಿಟಿ 200 ದಿನಗಳವರೆಗೆ ಮಾತ್ರ ನೀಡಲಾಗಿದೆ.

ಈ ಯೋಜನೆ ಬಳಸುವ ಗ್ರಾಹಕರಿಗೆ ಅನಿಯಮಿತ ಕರೆ ಮತ್ತು SMS ಸೌಲಭ್ಯ ನೀಡಿದ್ದು, ಜೊತೆಗೆ 5G ಡೇಟಾ ಬೆಂಬಲವನ್ನು ನೀಡಲಾಗುತ್ತದೆ. ಅಲ್ಲದೇ, 500GB 4G ಡೇಟಾ ಅಥವಾ 2.5GB ದೈನಂದಿನ 4G ಡೇಟಾ ಸೌಲಭ್ಯ ನೀಡಲಾಗಿದೆ.

ಬಳಕೆದಾರರು ಕನಿಷ್ಠ 2500 ರೂ. ಗಳವರೆಗೆ ಹಣ ನೀಡಿ ಈ ಯೋಜನೆ ಖರೀದಿ ಮಾಡಿದರೆ ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕ್ಲೌಡ್‌ನ ಚಂದದಾರಿಕೆ ಪಡೆಯಬಹುದು. ಜೊತೆಗೆ 500 ರೂಪಾಯಿ ಮೌಲ್ಯದ Ajio ದ ಕೂಪನ್‌ ಕೂಡ ಇದೆ. ಬಳಕೆದಾರರು ಲಿಂಕ್‌ ಮೂಲಕ ಶಾಪಿಂಗ್‌ ಮಾಡಬಹುದು.

ಇನ್ನು ಸ್ವಿಗ್ಗಿಯಿಂದ ಆರ್ಡರ್‌ ಮಾಡಿದರೆ 150ರೂಪಾಯಿ ರಿಯಾಯಿತಿ ಸಿಗುತ್ತದೆ. ಆದರೆ ಅದಕ್ಕಾಗಿ ಕನಿಷ್ಠ 499 ರೂಪಾಯಿ ಆರ್ಡರ್‌ ಮಾಡಬೇಕು. EaseMyTrip ಮುಖಾಂತರ ನೀವು ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿದರೆ 1,500 ರೂ.ಗಳ ರಿಯಾಯಿತಿ ಪಡೆಯಬಹುದು ಎಂದು ಜಿಯೋ ಕಂಪನಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

9 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

18 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

18 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

18 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

18 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

18 hours ago