ಟೆಕ್‌

ಹೊಸ ವರ್ಷಕ್ಕೆ ಜಿಯೋ ಧಮಾಕಾ ಆಫರ್:‌ 200 ದಿನ ಅನಿಯಮಿತ 5g

ಮುಂಬೈ: ಭಾರತದ ದೂರ ಸಂಪರ್ಕ (ಟೆಲಿಕಾಂ) ಕ್ಷೇತ್ರದ ದೈತ್ಯ ಜಿಯೋ ಕಂಪನಿ ಹೊಸ ವರ್ಷಕ್ಕೆ ಹೊಸ ಪ್ರಿಪೇಯ್ಡ್‌ ಯೋಜನೆ ಜಾರಿ ಮಾಡುವ ಮೂಲಕ ಬಳಕೆದಾದರಿಗೆ ಬಂಪರ್‌ ಉಡುಗೊರೆ ನೀಡಿದೆ.

ತನ್ನ ಬಳಕೆದಾರರನ್ನು ಹೆಚ್ಚಿಸುವ ಜೊತೆಗೆ ಈಗಿರುವ ಬಳಕೆದಾರರಿಗೆ ಕಂಪನಿ ಹೊಸ ಆಫರ್‌ ನೀಡಿದೆ. ಈ ಯೋಜನೆಯಲ್ಲಿ ಜಿಯೋ ಬಳಕೆದಾರರು ಅನಿಯಮಿತ ಧ್ವನಿ ಕರೆ ಮತ್ತು ಎಸ್‌ಎಂಎಸ್‌ ಸೇವೆ ಪಡೆಯಬಹುದು.

ಜಿಯೋ ಎಂದಿನಂತೆ ಈ ಬಾರಿಯು ವರ್ಷದ ಅಂತ್ಯದಲ್ಲಿ ಹೊಸ ಆಫರ್‌ ಬಿಡುಗಡೆ ಮಾಡಿದೆ. ತಮ್ಮ ಚಂದದಾರರಿಗೆ 2,150ರವರೆಗೆ ಈ ಯೋಜನೆಯಲ್ಲಿ ಪ್ರಯೋಜನ ನೀಡಲಾಗಿದ್ದು, ಶಾಪಿಂಗ್‌ ಸೈಟ್‌ ರಿಯಾಯಿತಿ, ಆಹಾರ ವಿತರಣಾ ಅಪ್ಲಿಕೇಶನ್‌ಗಳು ಹಾಗೂ ಫ್ಲೈಟ್‌ ಬುಕಿಂಗ್‌ಗಳಿಗೂ ಪ್ರವೇಶ ನೀಡಿದೆ.

ಗ್ರಾಹಕರು ಜನವರಿ 11, 2025 ರೊಳಗೆ ಈ ಯೋಜನೆ ಖರೀದಿಸಿದರೆ ಮಾತ್ರ ಇದರ ಪ್ರಯೋಜನ ಪಡೆಯಬಹುದಾಗಿದೆ. ಇದರ ವ್ಯಾಲಿಡಿಟಿ 200 ದಿನಗಳವರೆಗೆ ಮಾತ್ರ ನೀಡಲಾಗಿದೆ.

ಈ ಯೋಜನೆ ಬಳಸುವ ಗ್ರಾಹಕರಿಗೆ ಅನಿಯಮಿತ ಕರೆ ಮತ್ತು SMS ಸೌಲಭ್ಯ ನೀಡಿದ್ದು, ಜೊತೆಗೆ 5G ಡೇಟಾ ಬೆಂಬಲವನ್ನು ನೀಡಲಾಗುತ್ತದೆ. ಅಲ್ಲದೇ, 500GB 4G ಡೇಟಾ ಅಥವಾ 2.5GB ದೈನಂದಿನ 4G ಡೇಟಾ ಸೌಲಭ್ಯ ನೀಡಲಾಗಿದೆ.

ಬಳಕೆದಾರರು ಕನಿಷ್ಠ 2500 ರೂ. ಗಳವರೆಗೆ ಹಣ ನೀಡಿ ಈ ಯೋಜನೆ ಖರೀದಿ ಮಾಡಿದರೆ ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕ್ಲೌಡ್‌ನ ಚಂದದಾರಿಕೆ ಪಡೆಯಬಹುದು. ಜೊತೆಗೆ 500 ರೂಪಾಯಿ ಮೌಲ್ಯದ Ajio ದ ಕೂಪನ್‌ ಕೂಡ ಇದೆ. ಬಳಕೆದಾರರು ಲಿಂಕ್‌ ಮೂಲಕ ಶಾಪಿಂಗ್‌ ಮಾಡಬಹುದು.

ಇನ್ನು ಸ್ವಿಗ್ಗಿಯಿಂದ ಆರ್ಡರ್‌ ಮಾಡಿದರೆ 150ರೂಪಾಯಿ ರಿಯಾಯಿತಿ ಸಿಗುತ್ತದೆ. ಆದರೆ ಅದಕ್ಕಾಗಿ ಕನಿಷ್ಠ 499 ರೂಪಾಯಿ ಆರ್ಡರ್‌ ಮಾಡಬೇಕು. EaseMyTrip ಮುಖಾಂತರ ನೀವು ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿದರೆ 1,500 ರೂ.ಗಳ ರಿಯಾಯಿತಿ ಪಡೆಯಬಹುದು ಎಂದು ಜಿಯೋ ಕಂಪನಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

47 mins ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

3 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

4 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

4 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

11 hours ago