ಟೆಕ್‌

ಮಾರುಕಟ್ಟೆಗೆ ಬಂದ ಐಫೋನ್ ಹದಿನಾರು

ಬಹುನಿರೀಕ್ಷಿತ ಐಫೋನ್ 16 ಸರಣಿಯ ಸ್ಮಾರ್ಟ್‌ ಫೋನ್‌ಗಳನ್ನು ಆ್ಯಪಲ್ ಕಂಪೆನಿಯು ತನ್ನ ವಾರ್ಷಿಕ ಸಮಾವೇಶದಲ್ಲಿ ಬಿಡುಗಡೆ ಮಾಡಿದ್ದು, 16ರ ಸರಣಿಯ ಐಫೋನ್ 16, ಐಫೋನ್ 16 ಪ್ಲಸ್, ಐಫೋನ್ 16 ಪ್ರೊ, ಐಫೋನ್ 16 ಪ್ರೊ ಮ್ಯಾಕ್ಸ್ ಎಂಬ ನಾಲ್ಕು ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಐಫೋನ್ 16ನಲ್ಲಿ 6.1 ಇಂಚಿನ ಡಿಸ್‌ಪ್ಲೇ ಹಾಗೂ 16 ಪ್ಲಸ್ ಆವೃತ್ತಿಯಲ್ಲಿ 6.7 XRD OLED ಪ್ಯಾನಲ್ ಹೊಂದಿರ ಲಿದೆ. ಆದರೆ ಪಿಕ್ಸೆಲ್ ಸಾಂದ್ರತೆ 460 ಪಿಪಿಎ ಹಾಗೂ 60Hz ರಿಫ್ರೆಶ್‌ರೇಟ್ ಇದೆ. ಫೋನ್‌ನ ಹೊರ ಕವಚವು ಏರೋ ಸ್ಪೇಸ್ ಗುಣಮಟ್ಟದ ಅಲ್ಯೂಮಿನಿಯಂ ನಿಂದ ಸಿದ್ಧಪಡಿಸಲಾಗಿದೆ.

ಐಫೋನ್ 16 ಪ್ರೊ ಮತ್ತು 16 ಪ್ರೊ ಮ್ಯಾಕ್ಸ್ ಅನುಕ್ರಮವಾಗಿ 6.3 ಇಂಚು ಮತ್ತು 6.9 ಇಂಚಿನ ಪರದೆಯನ್ನು ಹೊಂದಿರಲಿದೆ. ಹೀಗಾಗಿ ದೊಡ್ಡ ಪರದೆ
ಮತ್ತು ದೊಡ್ಡ ಬ್ಯಾಟರಿ ಬಳಕೆದಾರರಿಗೆ ಸಿಗಲಿದೆ. ಅಲ್ಲದೆ ಪ್ರೊ ಮಾದರಿಯ ಫೋನ್‌ಗಳ ಕ್ಯಾಮೆರಾಗಳ ಹಾರ್ಡ್ ವೇರ್, ಸೆನ್ಸರ್ ಗಳು ಬೇರೆಯೇ ಆಗಿದ್ದು, ಗುಣಮಟ್ಟದ ಚಿತ್ರೀಕರಣಕ್ಕೆ ಸಹಾಯಕವಾಗಿದೆ.

ಇನ್ನು ಐಫೋನ್ 16 ಮತ್ತು 16ಪ್ಲಸ್‌ನಲ್ಲಿ 48 ಮೆಗಾಪಿಕ್ಸೆಲ್‌ ಪ್ರಧಾನ ಕ್ಯಾಮೆರಾದೊಂದಿಗೆ 12ಎಂಪಿ ಅಲ್ಪಾವೈಡ್ ಆ್ಯಂಗಲ್ ಸೆನ್ಸರ್ ಇದೆ. ಜತೆಗೆ 12ಎಂಪಿಬಸೆಲ್ಸಿ ಕ್ಯಾಮೆರಾ ಇದೆ. ಐಫೋನ್ 16 ಪ್ರೊ ಮತ್ತು 16 ಪ್ರೊ ಮ್ಯಾಕ್ಸ್‌ಗಳಲ್ಲಿ 48 ಮೆಗಾ ಪಿಕ್ಸೆಲ್‌ ಪ್ರಧಾನ ಕ್ಯಾಮೆರಾದೊಂದಿಗೆ 12ಎಂಪಿ ಅಲ್ಫಾ ವೈಡ್ ಆ್ಯಂಗಲ್ ಸೆನ್ಸ‌ ಇದೆ. ಜತೆಗೆ 12 ಎಂಪಿ ಸೆಲ್ವಿ ಕ್ಯಾಮೆರಾ ಇದೆ.

ಇನ್ನು ಐಫೋನ್ ಪ್ರೊ ಮ್ಯಾಕ್ಸ್‌ನಲ್ಲಿ ಸತತ 33 ಗಂಟೆಗಳವರೆಗೆ ವಿಡಿಯೊ ರೆರ್ಕಾಡಿಂಗ್‌ಗೆ ಅನುಕೂಲವಾಗುವಂತೆ ಬ್ಯಾಟರಿ ವ್ಯವಸ್ಥೆ ಮಾಡಲಾಗಿದೆ.

ಐಫೋನ್ 16, 128ಜಿಬಿ, 256ಜಿಬಿ ಮತ್ತು 512ಜಿಬಿಯಲ್ಲಿ ಲಭ್ಯವಿದ್ದು, ಬೆಲೆಯು ಕ್ರಮವಾಗಿ 79,900 ರೂ., 999 ರೂ. ಮತ್ತು 1,09,900 ರೂ.ಗಳಿಗೆ ಲಭ್ಯವಾಗಲಿದೆ.

• ಐಫೋನ್ 16 ಪ್ಲಸ್ 128ಜಿಬಿ, 256ಜಿಬಿ ಮತ್ತು 512ಜಿಬಿಯಲ್ಲಿ ಲಭ್ಯವಿದ್ದು, 89,900 ರೂ, 99,999ರೂ., 1,19,900ರೂಗಳಿಗೆ ಲಭ್ಯವಿದೆ.

• 16 ಪ್ರೊ ಫೋನ್ 128ಜಿಬಿ, 256ಜಿಬಿ, 512ಜಿಬಿ ಮತ್ತು 1ಟಿಬಿಗಳಲ್ಲಿ ಲಭ್ಯವಿದ್ದು, ಕ್ರಮವಾಗಿ 1,19,900 ರೂ., 1,29,999 ರೂ., 1,49,999 ರೂ., 169,900 ರೂ.ಗಳಲ್ಲಿ ಲಭ್ಯ.

• 16 ಪ್ರೊ ಮ್ಯಾಕ್ಸ್ 256 ಜಿಬಿಗೆ 1,44,900 ರೂ., 512ಜಿಬಿಗೆ 1,64,999 ರೂ. ಮತ್ತು 1ಟಿಬಿಗೆ 1,84,900 ರೂ.ಗಳಲ್ಲಿ ಲಭ್ಯವಾಗಲಿದೆ.

ಈ ಫೋನ್‌ಗಳು ಸೆಪ್ಟೆಂಬರ್ 13ರಿಂದ ಆನ್‌ಲೈನ್‌ನಲ್ಲಿ ಮುಂಗಡ ಬುಕ್ಕಿಂಗ್‌ಗೆ ಲಭ್ಯವಿದ್ದು, ಸೆ.20ರಿಂದ ಮಳಿಗೆಗಳಲ್ಲಿ ಸಿಗಲಿದೆ.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

11 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

14 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

17 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

21 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

21 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

21 hours ago