ಟೆಕ್‌

ವಾಟ್ಸಾಪ್‌ಗೆ ಈಗ ಇನ್ನಷ್ಟು ಭದ್ರತೆ

ಪ್ರಪಂಚದಾದ್ಯಂತ ಹೆಚ್ಚಿನ ಜನರು ಬಳಸುವ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಕಂಪೆನಿಯು ತನ್ನ ಸೆಕ್ಯೂರಿಟಿಯನ್ನು ಮತ್ತಷ್ಟು ಬಲಪಡಿಸುತ್ತಿದೆ. ನೀವು ವಾಟ್ಸಾಪ್ ಬಳಕೆದಾರರೇ? ನೀವು ನಿಮ್ಮ ವಾಟ್ಸಾಪ್ ಹೆಚ್ಚು ಸೆಕ್ಯೂರಿಟಿಯಿಂದ ಕೂಡಿರಬೇಕು ಎಂದು ಬಯಸುವುದಾದರೆ ಇಲ್ಲಿದೆ ನೋಡಿ ವ್ಯಾಟ್ಸಾಪ್‌ನ ಹೊಸ ಫೀಚರ್.

ವಾಟ್ಸಾಪ್ ತನ್ನ ಸೆಕ್ಯೂರಿಟಿ ಫೀಚರ್‌ಗಳನ್ನು ದಿನೇ ದಿನೇ ಬಲಪಡಿಸುತ್ತಿದೆ. ಈಗ ಮತ್ತೊಂದು ಅತ್ಯಾಧುನಿಕ ಸೆಕ್ಯೂರಿಟಿ ಫೀಚರ್ ಅನ್ನು ಅಭಿವೃದ್ಧಿಪಡಿಸಿದೆ. ಅದು “ಪಾಸ್‌ಕೀ ಸಪೋರ್ಟ್’.

ಮೆಟಾ ಕಂಪೆನಿ ಈ ಫೀಚರ್ ಮೇಲೆ 2024ರ ಜನವರಿ ತಿಂಗಳಲ್ಲಿ ಕಾರ್ಯ ಆರಂಭಿಸಿತು. ನಂತರದ ಮೂರು ತಿಂಗಳು ಬೆಟಾ ಟೆಸ್ಟಿಂಗ್ ಮಾಡುವ ಮೂಲಕ, ಈಗ ವಾಟ್ಸಾಪ್ ಬಳಕೆದಾರರಿಗೆ ಜಗತ್ತಿನಾದ್ಯಂತ ಲಭ್ಯಗೊಳಿಸಿದೆ. ಅಂದಹಾಗೆ ‘ಪಾಸ್‌ಕೀ ಸಪೋರ್ಟ್’ ಫೀಚರ್ ಐಫೋನ್ ಬಳಕೆದಾರರಿಗೆ ಲಭ್ಯವಿದೆ. ಆದರೆ ಇದಕ್ಕೂ ಮೊದಲೇ ಆಂಡ್ರಾಯ್ಡ್ ಅಪ್ಲಿಕೇಶನ್ ಬಳಕೆದಾರರಿಗೂ ಈ ಫೀಚರ್ ಅಳವಡಿಸಲಾಗಿದೆ.

ಈ ಸೆಕ್ಯೂರಿಟಿ ಯಾವ ಐಓಎಸ್ ವರ್ಷನ್‌ನಲ್ಲಿ ಲಭ್ಯವಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಈ ಹಿಂದಿನ ಒಂದು ವರದಿ ಪ್ರಕಾರ ಐಒಎಸ್ 17 ಮತ್ತು ಅದರ ನಂತರದ ವರ್ಷನ್‌ಗಳಲ್ಲಿ ‘ಪಾಸ್‌ಕೀ ಸಪೋರ್ಟ್’ ವರ್ಕ್
ಆಗಲಿದೆ ಎಂದು ಹೇಳಲಾಗಿದೆ.

Passkey ಹೇಗೆ ಭದ್ರತೆಯನ್ನು ಹೆಚ್ಚಿಸುತ್ತದೆ? ಎಸ್‌ಎಂಎಸ್‌ ಕೋಡ್‌ಗೆ ಹೋಲಿಸಿದರೆ, ಪಾಸ್‌ ಕೀ ಒಂದು ಅತ್ಯುತ್ತಮ ಭದ್ರತಾ ಫೀಚರ್ ಆಗಿದೆ. ಇದೊಂದು ಅಥೆಂಟಿಕೇಷನ್ ವಿಧಾನವಾಗಿದೆ. ಇದನ್ನು ಫಿಡೊ ಅಲೈಯನ್ಸ್ ನಿಂದ ಅಭಿವೃದ್ಧಿಪಡಿಸಿದ್ದು, ದೊಡ್ಡ ದೊಡ್ಡ ಟೆಕ್ ದೈತ್ಯ ಕಂಪೆನಿಗಳಾದ ಆ್ಯಪಲ್, ಗೂಗಲ್, ಮೈಕ್ರೋಸಾಫ್ಟ್ ಕಂಪೆನಿಗಳು ಅನುಮೋದಿಸಿವೆ.

ಪಾಸ್‌ಕೀ ಸೆಟ್ ಮಾಡುವುದು ಹೇಗೆ?
• ನಿಮ್ಮ ಐಒಎಸ್ ಡಿವೈಸ್‌ನಲ್ಲಿ ವಾಟ್ಸಾಪ್‌ ಅಪ್ಲಿಕೇಶನ್ ಓಪನ್ ಮಾಡಿ.
• ಸೆಟ್ಟಿಂಗ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ‘Accounts’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
• ‘Passkeys’ ಆಯ್ಕೆ 4ನೇ ಆಕ್ಷನ್ ಆಗಿ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
• ಮುಂದಿನ ಸ್ಟೀನ್‌ನಲ್ಲಿ ‘Create Passkey’ ಬಟನ್ ಕ್ಲಿಕ್ ಮಾಡಿ.
ನಂತರ ನೀವು Face ID ಅಥವಾ Touch ID ಆಯ್ಕೆಗಳನ್ನು ನೋಡುತ್ತೀರಿ. ಆಯ್ಕೆ ಮಾಡಿ ‘Continue’ ಎಂಬಲ್ಲಿ ಕ್ಲಿಕ್ ಮಾಡಿ.

andolana

Recent Posts

ಇರಾನ್‌ನ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

6 mins ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

40 mins ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

1 hour ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

1 hour ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

2 hours ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

2 hours ago