ಪ್ರಪಂಚದಾದ್ಯಂತ ಹೆಚ್ಚಿನ ಜನರು ಬಳಸುವ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಕಂಪೆನಿಯು ತನ್ನ ಸೆಕ್ಯೂರಿಟಿಯನ್ನು ಮತ್ತಷ್ಟು ಬಲಪಡಿಸುತ್ತಿದೆ. ನೀವು ವಾಟ್ಸಾಪ್ ಬಳಕೆದಾರರೇ? ನೀವು ನಿಮ್ಮ ವಾಟ್ಸಾಪ್ ಹೆಚ್ಚು ಸೆಕ್ಯೂರಿಟಿಯಿಂದ ಕೂಡಿರಬೇಕು ಎಂದು ಬಯಸುವುದಾದರೆ ಇಲ್ಲಿದೆ ನೋಡಿ ವ್ಯಾಟ್ಸಾಪ್ನ ಹೊಸ ಫೀಚರ್.
ವಾಟ್ಸಾಪ್ ತನ್ನ ಸೆಕ್ಯೂರಿಟಿ ಫೀಚರ್ಗಳನ್ನು ದಿನೇ ದಿನೇ ಬಲಪಡಿಸುತ್ತಿದೆ. ಈಗ ಮತ್ತೊಂದು ಅತ್ಯಾಧುನಿಕ ಸೆಕ್ಯೂರಿಟಿ ಫೀಚರ್ ಅನ್ನು ಅಭಿವೃದ್ಧಿಪಡಿಸಿದೆ. ಅದು “ಪಾಸ್ಕೀ ಸಪೋರ್ಟ್’.
ಮೆಟಾ ಕಂಪೆನಿ ಈ ಫೀಚರ್ ಮೇಲೆ 2024ರ ಜನವರಿ ತಿಂಗಳಲ್ಲಿ ಕಾರ್ಯ ಆರಂಭಿಸಿತು. ನಂತರದ ಮೂರು ತಿಂಗಳು ಬೆಟಾ ಟೆಸ್ಟಿಂಗ್ ಮಾಡುವ ಮೂಲಕ, ಈಗ ವಾಟ್ಸಾಪ್ ಬಳಕೆದಾರರಿಗೆ ಜಗತ್ತಿನಾದ್ಯಂತ ಲಭ್ಯಗೊಳಿಸಿದೆ. ಅಂದಹಾಗೆ ‘ಪಾಸ್ಕೀ ಸಪೋರ್ಟ್’ ಫೀಚರ್ ಐಫೋನ್ ಬಳಕೆದಾರರಿಗೆ ಲಭ್ಯವಿದೆ. ಆದರೆ ಇದಕ್ಕೂ ಮೊದಲೇ ಆಂಡ್ರಾಯ್ಡ್ ಅಪ್ಲಿಕೇಶನ್ ಬಳಕೆದಾರರಿಗೂ ಈ ಫೀಚರ್ ಅಳವಡಿಸಲಾಗಿದೆ.
ಈ ಸೆಕ್ಯೂರಿಟಿ ಯಾವ ಐಓಎಸ್ ವರ್ಷನ್ನಲ್ಲಿ ಲಭ್ಯವಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಈ ಹಿಂದಿನ ಒಂದು ವರದಿ ಪ್ರಕಾರ ಐಒಎಸ್ 17 ಮತ್ತು ಅದರ ನಂತರದ ವರ್ಷನ್ಗಳಲ್ಲಿ ‘ಪಾಸ್ಕೀ ಸಪೋರ್ಟ್’ ವರ್ಕ್
ಆಗಲಿದೆ ಎಂದು ಹೇಳಲಾಗಿದೆ.
Passkey ಹೇಗೆ ಭದ್ರತೆಯನ್ನು ಹೆಚ್ಚಿಸುತ್ತದೆ? ಎಸ್ಎಂಎಸ್ ಕೋಡ್ಗೆ ಹೋಲಿಸಿದರೆ, ಪಾಸ್ ಕೀ ಒಂದು ಅತ್ಯುತ್ತಮ ಭದ್ರತಾ ಫೀಚರ್ ಆಗಿದೆ. ಇದೊಂದು ಅಥೆಂಟಿಕೇಷನ್ ವಿಧಾನವಾಗಿದೆ. ಇದನ್ನು ಫಿಡೊ ಅಲೈಯನ್ಸ್ ನಿಂದ ಅಭಿವೃದ್ಧಿಪಡಿಸಿದ್ದು, ದೊಡ್ಡ ದೊಡ್ಡ ಟೆಕ್ ದೈತ್ಯ ಕಂಪೆನಿಗಳಾದ ಆ್ಯಪಲ್, ಗೂಗಲ್, ಮೈಕ್ರೋಸಾಫ್ಟ್ ಕಂಪೆನಿಗಳು ಅನುಮೋದಿಸಿವೆ.
ಪಾಸ್ಕೀ ಸೆಟ್ ಮಾಡುವುದು ಹೇಗೆ?
• ನಿಮ್ಮ ಐಒಎಸ್ ಡಿವೈಸ್ನಲ್ಲಿ ವಾಟ್ಸಾಪ್ ಅಪ್ಲಿಕೇಶನ್ ಓಪನ್ ಮಾಡಿ.
• ಸೆಟ್ಟಿಂಗ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ‘Accounts’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
• ‘Passkeys’ ಆಯ್ಕೆ 4ನೇ ಆಕ್ಷನ್ ಆಗಿ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
• ಮುಂದಿನ ಸ್ಟೀನ್ನಲ್ಲಿ ‘Create Passkey’ ಬಟನ್ ಕ್ಲಿಕ್ ಮಾಡಿ.
ನಂತರ ನೀವು Face ID ಅಥವಾ Touch ID ಆಯ್ಕೆಗಳನ್ನು ನೋಡುತ್ತೀರಿ. ಆಯ್ಕೆ ಮಾಡಿ ‘Continue’ ಎಂಬಲ್ಲಿ ಕ್ಲಿಕ್ ಮಾಡಿ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…