ಟೆಕ್‌

ವಾಟ್ಸಾಪ್‌ಗೆ ಈಗ ಇನ್ನಷ್ಟು ಭದ್ರತೆ

ಪ್ರಪಂಚದಾದ್ಯಂತ ಹೆಚ್ಚಿನ ಜನರು ಬಳಸುವ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಕಂಪೆನಿಯು ತನ್ನ ಸೆಕ್ಯೂರಿಟಿಯನ್ನು ಮತ್ತಷ್ಟು ಬಲಪಡಿಸುತ್ತಿದೆ. ನೀವು ವಾಟ್ಸಾಪ್ ಬಳಕೆದಾರರೇ? ನೀವು ನಿಮ್ಮ ವಾಟ್ಸಾಪ್ ಹೆಚ್ಚು ಸೆಕ್ಯೂರಿಟಿಯಿಂದ ಕೂಡಿರಬೇಕು ಎಂದು ಬಯಸುವುದಾದರೆ ಇಲ್ಲಿದೆ ನೋಡಿ ವ್ಯಾಟ್ಸಾಪ್‌ನ ಹೊಸ ಫೀಚರ್.

ವಾಟ್ಸಾಪ್ ತನ್ನ ಸೆಕ್ಯೂರಿಟಿ ಫೀಚರ್‌ಗಳನ್ನು ದಿನೇ ದಿನೇ ಬಲಪಡಿಸುತ್ತಿದೆ. ಈಗ ಮತ್ತೊಂದು ಅತ್ಯಾಧುನಿಕ ಸೆಕ್ಯೂರಿಟಿ ಫೀಚರ್ ಅನ್ನು ಅಭಿವೃದ್ಧಿಪಡಿಸಿದೆ. ಅದು “ಪಾಸ್‌ಕೀ ಸಪೋರ್ಟ್’.

ಮೆಟಾ ಕಂಪೆನಿ ಈ ಫೀಚರ್ ಮೇಲೆ 2024ರ ಜನವರಿ ತಿಂಗಳಲ್ಲಿ ಕಾರ್ಯ ಆರಂಭಿಸಿತು. ನಂತರದ ಮೂರು ತಿಂಗಳು ಬೆಟಾ ಟೆಸ್ಟಿಂಗ್ ಮಾಡುವ ಮೂಲಕ, ಈಗ ವಾಟ್ಸಾಪ್ ಬಳಕೆದಾರರಿಗೆ ಜಗತ್ತಿನಾದ್ಯಂತ ಲಭ್ಯಗೊಳಿಸಿದೆ. ಅಂದಹಾಗೆ ‘ಪಾಸ್‌ಕೀ ಸಪೋರ್ಟ್’ ಫೀಚರ್ ಐಫೋನ್ ಬಳಕೆದಾರರಿಗೆ ಲಭ್ಯವಿದೆ. ಆದರೆ ಇದಕ್ಕೂ ಮೊದಲೇ ಆಂಡ್ರಾಯ್ಡ್ ಅಪ್ಲಿಕೇಶನ್ ಬಳಕೆದಾರರಿಗೂ ಈ ಫೀಚರ್ ಅಳವಡಿಸಲಾಗಿದೆ.

ಈ ಸೆಕ್ಯೂರಿಟಿ ಯಾವ ಐಓಎಸ್ ವರ್ಷನ್‌ನಲ್ಲಿ ಲಭ್ಯವಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಈ ಹಿಂದಿನ ಒಂದು ವರದಿ ಪ್ರಕಾರ ಐಒಎಸ್ 17 ಮತ್ತು ಅದರ ನಂತರದ ವರ್ಷನ್‌ಗಳಲ್ಲಿ ‘ಪಾಸ್‌ಕೀ ಸಪೋರ್ಟ್’ ವರ್ಕ್
ಆಗಲಿದೆ ಎಂದು ಹೇಳಲಾಗಿದೆ.

Passkey ಹೇಗೆ ಭದ್ರತೆಯನ್ನು ಹೆಚ್ಚಿಸುತ್ತದೆ? ಎಸ್‌ಎಂಎಸ್‌ ಕೋಡ್‌ಗೆ ಹೋಲಿಸಿದರೆ, ಪಾಸ್‌ ಕೀ ಒಂದು ಅತ್ಯುತ್ತಮ ಭದ್ರತಾ ಫೀಚರ್ ಆಗಿದೆ. ಇದೊಂದು ಅಥೆಂಟಿಕೇಷನ್ ವಿಧಾನವಾಗಿದೆ. ಇದನ್ನು ಫಿಡೊ ಅಲೈಯನ್ಸ್ ನಿಂದ ಅಭಿವೃದ್ಧಿಪಡಿಸಿದ್ದು, ದೊಡ್ಡ ದೊಡ್ಡ ಟೆಕ್ ದೈತ್ಯ ಕಂಪೆನಿಗಳಾದ ಆ್ಯಪಲ್, ಗೂಗಲ್, ಮೈಕ್ರೋಸಾಫ್ಟ್ ಕಂಪೆನಿಗಳು ಅನುಮೋದಿಸಿವೆ.

ಪಾಸ್‌ಕೀ ಸೆಟ್ ಮಾಡುವುದು ಹೇಗೆ?
• ನಿಮ್ಮ ಐಒಎಸ್ ಡಿವೈಸ್‌ನಲ್ಲಿ ವಾಟ್ಸಾಪ್‌ ಅಪ್ಲಿಕೇಶನ್ ಓಪನ್ ಮಾಡಿ.
• ಸೆಟ್ಟಿಂಗ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ‘Accounts’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
• ‘Passkeys’ ಆಯ್ಕೆ 4ನೇ ಆಕ್ಷನ್ ಆಗಿ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
• ಮುಂದಿನ ಸ್ಟೀನ್‌ನಲ್ಲಿ ‘Create Passkey’ ಬಟನ್ ಕ್ಲಿಕ್ ಮಾಡಿ.
ನಂತರ ನೀವು Face ID ಅಥವಾ Touch ID ಆಯ್ಕೆಗಳನ್ನು ನೋಡುತ್ತೀರಿ. ಆಯ್ಕೆ ಮಾಡಿ ‘Continue’ ಎಂಬಲ್ಲಿ ಕ್ಲಿಕ್ ಮಾಡಿ.

andolana

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

1 hour ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

1 hour ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

1 hour ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago