ಟೆಕ್‌

ವಾಟ್ಸಾಪ್‌ಗೆ ಈಗ ಇನ್ನಷ್ಟು ಭದ್ರತೆ

ಪ್ರಪಂಚದಾದ್ಯಂತ ಹೆಚ್ಚಿನ ಜನರು ಬಳಸುವ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಕಂಪೆನಿಯು ತನ್ನ ಸೆಕ್ಯೂರಿಟಿಯನ್ನು ಮತ್ತಷ್ಟು ಬಲಪಡಿಸುತ್ತಿದೆ. ನೀವು ವಾಟ್ಸಾಪ್ ಬಳಕೆದಾರರೇ? ನೀವು ನಿಮ್ಮ ವಾಟ್ಸಾಪ್ ಹೆಚ್ಚು ಸೆಕ್ಯೂರಿಟಿಯಿಂದ ಕೂಡಿರಬೇಕು ಎಂದು ಬಯಸುವುದಾದರೆ ಇಲ್ಲಿದೆ ನೋಡಿ ವ್ಯಾಟ್ಸಾಪ್‌ನ ಹೊಸ ಫೀಚರ್.

ವಾಟ್ಸಾಪ್ ತನ್ನ ಸೆಕ್ಯೂರಿಟಿ ಫೀಚರ್‌ಗಳನ್ನು ದಿನೇ ದಿನೇ ಬಲಪಡಿಸುತ್ತಿದೆ. ಈಗ ಮತ್ತೊಂದು ಅತ್ಯಾಧುನಿಕ ಸೆಕ್ಯೂರಿಟಿ ಫೀಚರ್ ಅನ್ನು ಅಭಿವೃದ್ಧಿಪಡಿಸಿದೆ. ಅದು “ಪಾಸ್‌ಕೀ ಸಪೋರ್ಟ್’.

ಮೆಟಾ ಕಂಪೆನಿ ಈ ಫೀಚರ್ ಮೇಲೆ 2024ರ ಜನವರಿ ತಿಂಗಳಲ್ಲಿ ಕಾರ್ಯ ಆರಂಭಿಸಿತು. ನಂತರದ ಮೂರು ತಿಂಗಳು ಬೆಟಾ ಟೆಸ್ಟಿಂಗ್ ಮಾಡುವ ಮೂಲಕ, ಈಗ ವಾಟ್ಸಾಪ್ ಬಳಕೆದಾರರಿಗೆ ಜಗತ್ತಿನಾದ್ಯಂತ ಲಭ್ಯಗೊಳಿಸಿದೆ. ಅಂದಹಾಗೆ ‘ಪಾಸ್‌ಕೀ ಸಪೋರ್ಟ್’ ಫೀಚರ್ ಐಫೋನ್ ಬಳಕೆದಾರರಿಗೆ ಲಭ್ಯವಿದೆ. ಆದರೆ ಇದಕ್ಕೂ ಮೊದಲೇ ಆಂಡ್ರಾಯ್ಡ್ ಅಪ್ಲಿಕೇಶನ್ ಬಳಕೆದಾರರಿಗೂ ಈ ಫೀಚರ್ ಅಳವಡಿಸಲಾಗಿದೆ.

ಈ ಸೆಕ್ಯೂರಿಟಿ ಯಾವ ಐಓಎಸ್ ವರ್ಷನ್‌ನಲ್ಲಿ ಲಭ್ಯವಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಈ ಹಿಂದಿನ ಒಂದು ವರದಿ ಪ್ರಕಾರ ಐಒಎಸ್ 17 ಮತ್ತು ಅದರ ನಂತರದ ವರ್ಷನ್‌ಗಳಲ್ಲಿ ‘ಪಾಸ್‌ಕೀ ಸಪೋರ್ಟ್’ ವರ್ಕ್
ಆಗಲಿದೆ ಎಂದು ಹೇಳಲಾಗಿದೆ.

Passkey ಹೇಗೆ ಭದ್ರತೆಯನ್ನು ಹೆಚ್ಚಿಸುತ್ತದೆ? ಎಸ್‌ಎಂಎಸ್‌ ಕೋಡ್‌ಗೆ ಹೋಲಿಸಿದರೆ, ಪಾಸ್‌ ಕೀ ಒಂದು ಅತ್ಯುತ್ತಮ ಭದ್ರತಾ ಫೀಚರ್ ಆಗಿದೆ. ಇದೊಂದು ಅಥೆಂಟಿಕೇಷನ್ ವಿಧಾನವಾಗಿದೆ. ಇದನ್ನು ಫಿಡೊ ಅಲೈಯನ್ಸ್ ನಿಂದ ಅಭಿವೃದ್ಧಿಪಡಿಸಿದ್ದು, ದೊಡ್ಡ ದೊಡ್ಡ ಟೆಕ್ ದೈತ್ಯ ಕಂಪೆನಿಗಳಾದ ಆ್ಯಪಲ್, ಗೂಗಲ್, ಮೈಕ್ರೋಸಾಫ್ಟ್ ಕಂಪೆನಿಗಳು ಅನುಮೋದಿಸಿವೆ.

ಪಾಸ್‌ಕೀ ಸೆಟ್ ಮಾಡುವುದು ಹೇಗೆ?
• ನಿಮ್ಮ ಐಒಎಸ್ ಡಿವೈಸ್‌ನಲ್ಲಿ ವಾಟ್ಸಾಪ್‌ ಅಪ್ಲಿಕೇಶನ್ ಓಪನ್ ಮಾಡಿ.
• ಸೆಟ್ಟಿಂಗ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ‘Accounts’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
• ‘Passkeys’ ಆಯ್ಕೆ 4ನೇ ಆಕ್ಷನ್ ಆಗಿ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
• ಮುಂದಿನ ಸ್ಟೀನ್‌ನಲ್ಲಿ ‘Create Passkey’ ಬಟನ್ ಕ್ಲಿಕ್ ಮಾಡಿ.
ನಂತರ ನೀವು Face ID ಅಥವಾ Touch ID ಆಯ್ಕೆಗಳನ್ನು ನೋಡುತ್ತೀರಿ. ಆಯ್ಕೆ ಮಾಡಿ ‘Continue’ ಎಂಬಲ್ಲಿ ಕ್ಲಿಕ್ ಮಾಡಿ.

andolana

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

3 mins ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

9 mins ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

15 mins ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

21 mins ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

10 hours ago