ಟೆಕ್‌

ನಿಮ್ಮ ಬಳಿ ಈ 2 ಒನ್‌ಪ್ಲಸ್‌ ಮೊಬೈಲ್‌ ಇದ್ದರೆ ಸಾಫ್ಟ್‌ವೇರ್‌ ಅಪ್‌ಡೇಟ್‌ ಮರೆತುಬಿಡಿ!

ಭಾರತದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಒನ್‌ಪ್ಲಸ್‌ ಇದೀಗ ತನ್ನ ಒಂದಷ್ಟು ಗ್ರಾಹಕರಿಗೆ ಶಾಕಿಂಗ್‌ ಹಾಗೂ ಬೇಸರದ ಸುದ್ದಿಯನ್ನು ನೀಡಿದೆ. ತನ್ನ ಒನ್‌ಪ್ಲಸ್‌ 8 ಹಾಗೂ ಒನ್‌ಪ್ಲಸ್‌ 8 ಪ್ರೊ ಬಳಕೆದಾರರಿಗೆ ನಿಮ್ಮ ಮೊಬೈಲ್‌ಗಳು ಕೊನೆಯದಾಗಿ ಸಾಫ್ಟ್‌ವೇರ್‌ ಅಪ್‌ಡೇಟ್‌ಗಳನ್ನು ಸ್ವೀಕರಿಸುತ್ತಿವೆ ಎಂದು ತಿಳಿಸಿದೆ.

ಈ ಮೂಲಕ ಈ ಎರಡು ಮೊಬೈಲ್‌ಗಳ ಸಾಫ್ಟ್‌ವೇರ್‌ ಅಪ್‌ಡೇಟ್‌ ಮುಕ್ತಾಯದ ಬಗ್ಗೆ ಒನ್‌ಪ್ಲಸ್‌ ಅಧಿಕೃತವಾಗಿ ತಿಳಿಸಿದೆ. 2020ರ ಏಪ್ರಿಲ್‌ನಲ್ಲಿ ಬಿಡುಗಡೆಯಾದ ಈ ಫೋನ್‌ಗಳಿಗೆ 4 ವರ್ಷಗಳ ಭದ್ರತಾ ನವೀಕರಣಗಳು ಮತ್ತು 3 ಪ್ರಮುಖ ಆಂಡ್ರಾಯ್ಡ್‌ ಆಪರೇಟಿಂಗ್‌ ಸಿಸ್ಟಮ್‌ ಅಪ್‌ಡೇಟ್‌ಗಳ ಭರವಸೆಯನ್ನು ನೀಡಿತ್ತು.

ಬಿಲ್ಡ್‌ ನಂಬರ್‌ ಆಕ್ಸಿಸಜ್‌ ಓಎಸ್‌ 13.1.0.587 ಅನ್ನು ಹೊಂದಿರುವ ಅಪ್‌ಡೇಟ್‌ ಅಂತಿಮವಾಗಿರಲಿದ್ದು, ಇದು 2024ರ ಭದ್ರತಾ ಪ್ಯಾಚ್‌ ಅಪ್‌ ಅನ್ನು ಒಳಗೊಂಡಿರಲಿದೆ. ಹೀಗಾಗಿ ಈ ಎರಡು ಮೊಬೈಲ್‌ಗಳ ಗ್ರಾಹಕರು ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನಿರೀಕ್ಷೆಯನ್ನು ಇಟ್ಟುಕೊಳ್ಳುವಂತಿಲ್ಲ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

33 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

59 mins ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

1 hour ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

1 hour ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

2 hours ago