ಟೆಕ್‌

ನಿಮ್ಮ ಬಳಿ ಈ 2 ಒನ್‌ಪ್ಲಸ್‌ ಮೊಬೈಲ್‌ ಇದ್ದರೆ ಸಾಫ್ಟ್‌ವೇರ್‌ ಅಪ್‌ಡೇಟ್‌ ಮರೆತುಬಿಡಿ!

ಭಾರತದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಒನ್‌ಪ್ಲಸ್‌ ಇದೀಗ ತನ್ನ ಒಂದಷ್ಟು ಗ್ರಾಹಕರಿಗೆ ಶಾಕಿಂಗ್‌ ಹಾಗೂ ಬೇಸರದ ಸುದ್ದಿಯನ್ನು ನೀಡಿದೆ. ತನ್ನ ಒನ್‌ಪ್ಲಸ್‌ 8 ಹಾಗೂ ಒನ್‌ಪ್ಲಸ್‌ 8 ಪ್ರೊ ಬಳಕೆದಾರರಿಗೆ ನಿಮ್ಮ ಮೊಬೈಲ್‌ಗಳು ಕೊನೆಯದಾಗಿ ಸಾಫ್ಟ್‌ವೇರ್‌ ಅಪ್‌ಡೇಟ್‌ಗಳನ್ನು ಸ್ವೀಕರಿಸುತ್ತಿವೆ ಎಂದು ತಿಳಿಸಿದೆ.

ಈ ಮೂಲಕ ಈ ಎರಡು ಮೊಬೈಲ್‌ಗಳ ಸಾಫ್ಟ್‌ವೇರ್‌ ಅಪ್‌ಡೇಟ್‌ ಮುಕ್ತಾಯದ ಬಗ್ಗೆ ಒನ್‌ಪ್ಲಸ್‌ ಅಧಿಕೃತವಾಗಿ ತಿಳಿಸಿದೆ. 2020ರ ಏಪ್ರಿಲ್‌ನಲ್ಲಿ ಬಿಡುಗಡೆಯಾದ ಈ ಫೋನ್‌ಗಳಿಗೆ 4 ವರ್ಷಗಳ ಭದ್ರತಾ ನವೀಕರಣಗಳು ಮತ್ತು 3 ಪ್ರಮುಖ ಆಂಡ್ರಾಯ್ಡ್‌ ಆಪರೇಟಿಂಗ್‌ ಸಿಸ್ಟಮ್‌ ಅಪ್‌ಡೇಟ್‌ಗಳ ಭರವಸೆಯನ್ನು ನೀಡಿತ್ತು.

ಬಿಲ್ಡ್‌ ನಂಬರ್‌ ಆಕ್ಸಿಸಜ್‌ ಓಎಸ್‌ 13.1.0.587 ಅನ್ನು ಹೊಂದಿರುವ ಅಪ್‌ಡೇಟ್‌ ಅಂತಿಮವಾಗಿರಲಿದ್ದು, ಇದು 2024ರ ಭದ್ರತಾ ಪ್ಯಾಚ್‌ ಅಪ್‌ ಅನ್ನು ಒಳಗೊಂಡಿರಲಿದೆ. ಹೀಗಾಗಿ ಈ ಎರಡು ಮೊಬೈಲ್‌ಗಳ ಗ್ರಾಹಕರು ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನಿರೀಕ್ಷೆಯನ್ನು ಇಟ್ಟುಕೊಳ್ಳುವಂತಿಲ್ಲ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

58 mins ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

1 hour ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

2 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

2 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

2 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

5 hours ago