ಟೆಕ್‌

ಟೆಕ್ ಸಮಾಚಾರ; ಒಪ್ಪೋದಿಂದ ಹೊಚ್ಚಹೊಸ ಫೋನ್

ಚೀನಾ ಮೂಲದ ಸ್ಮಾರ್ಟ್‌ ಫೋನ್ ತಯಾರಿಕಾ ಕಂಪೆನಿ ‘ಒಪ್ಪೋ’ ಭಾರತದ ಮಾರುಕಟ್ಟೆಯಲ್ಲಿ ತನ್ನ ಸರಣಿಯ ಎಫ್25 ಪ್ರೋ 5ಜಿ ಮೊಬೈಲ್‌ ಅನ್ನು ಪರಿಚಯಿಸಿದೆ. ಈ ಫೋನ್ 128 ಜಿಬಿ ಮತ್ತು 256ಬಿಜಿ ಮೆಮೋರಿ ವೇರಿಯಂಟ್ಸ್‌ಗಳಲ್ಲಿ ಲಭ್ಯವಿದ್ದು, ಇದರ ಬೆಲೆ ಕ್ರಮವಾಗಿ 23,999 ರೂ. ಮತ್ತು 25,999 ರೂ.ಗಳಿಗೆ ಲಭ್ಯವಿದೆ.

ಈ ಫೋನ್ 7.54 ಎಂಎಂ ದಪ್ಪ ಮತ್ತು 6.7 ಇಂಚು ಇದೆ. ಅಲ್ಲದೆ 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 48 ನಿಮಿಷಗಳಲ್ಲಿ ಪೂರ್ಣ ಚಾರ್ಜಿಂಗ್ ಆಗಲಿದೆ. ಸ್ಕ್ರೀನ್ ರಕ್ಷಣೆಗಾಗಿ ಪಾಂಡ ಗ್ಲಾಸ್
ಅಳವಡಿಸಲಾಗಿದೆ. ಇನ್ನು ಈ ಫೋನ್‌ನಲ್ಲಿ 64 ಎಂಪಿ ಟ್ರಿಪಲ್ ಕ್ಯಾಮೆರಾ ಹಾಗೂ ಕತ್ತಲಿನಲ್ಲಿಯೂ ಗುಣಮಟ್ಟದ ಚಿತ್ರಗಳನ್ನು ಸೆರೆ ಹಿಡಿಯಲು ಅನುಕೂಲವಾಗುವ ಕ್ಯಾಮೆರಾಗಳನ್ನು ಹೊಂದಿದ್ದು, 4ಕೆ ವಿಡಿಯೋ ರೆಕಾರ್ಡಿಂಗ್ ಸಾಮರ್ಥ್ಯ ಹೊಂದಿದೆ. ‌

ಇನ್ನು ಮುಂಭಾಗದಲ್ಲಿ ಸೆಲ್ಫಿಗಳಿಗೆ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಎಐ ಆಧಾರಿತ ನೆಟ್‌ವರ್ಕ್ ಆಯ್ಕೆ ಮತ್ತು 360 ಡಿಗ್ರಿ ಸುತ್ತಲಿನ ಆಂಟೆನಾ ವಿನ್ಯಾಸವನ್ನು ಸಂಯೋಜಿಸಲಾಗಿದೆ. ಈ ಮೊಬೈಲ್ ಪ್ರಸ್ತುತ ಒಪ್ಪೋ ಮಳಿಗೆಗಳಲ್ಲಿ, ಅಮೆಜಾನ್, ಪ್ಲಿಪ್‌ಕಾರ್ಟ್‌ಗಳಲ್ಲಿ ಲಭ್ಯವಿದೆ. ಇನ್ನು ಎಐ ತಂತ್ರಜ್ಞಾನವು ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ.

andolana

Recent Posts

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

47 mins ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

51 mins ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

56 mins ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

1 hour ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

2 hours ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

2 hours ago