Categories: ಟೆಕ್‌

OTP ಬಂದ್? : ಟೆಲಿಕಾಂ ಕಂಪನಿಗಳಿಗೆ ಎಚ್ಚರಿಕೆ ನೀಡಿದ ಟ್ರಾಯ್‌

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ OTP ಗಳ ಮೂಲಕ ಹಣ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಕಾರಣ ಭಾರತೀಯ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರ (TRAI) ಹೊಸ ನಿಯಮಗಳನ್ನು ಜಾರಿಮಾಡಲು ನಿರ್ಧರಿಸಿದೆ.

ಮೊಬೈಲ್‌ಗಳಿಗೆ ಬರುವ ಒಟಿಪಿ (one time password)ಗಳ ಮೂಲ ಪತ್ತೆ ಮಾಡಲು, ಟ್ರಾಯ್‌ ಹೊಸ ನಿಯಮಗಳನ್ನು ರೂಪಿಸಿದೆ. ಈ ನಿಯಮಾವಳಿಗಳಿಗೆ ದೇಶಿಯ ಟೆಲಿಕಾಂ ಕಂಪನಿಗಳು ಇದೇ ನವೆಂಬರ್‌ 30ರೊಳಗೆ ಒಪ್ಪಿಗೆ ಸೂಚಿಸಬೇಕಿದೆ.

ಟ್ರಾಯ್‌ ನೀಡಿರುವ ಗಡುವಿನೊಳಗೆ ಟೆಲಿಕಾಂ ಕಂಪನಿಗಳು ಒಪ್ಪಿಗೆ ನೀಡದೆ ಇದ್ದರೆ ಡಿಸೆಂಬರ್‌ 1ರಿಂದ ಮೊಬೈಲ್‌ ಪೋನ್‌ಗಳಿಗೆ ಒಟಿಪಿಗಳು ಬರುವುದಿಲ್ಲ ಎಂದು ವರದಿಯಾಗಿದೆ.

ಈ ಹಿಂದೆ ಅಕ್ಟೋಬರ್‌ 31 ರ ವರೆಗೆ ಗಡುವು ನೀಡಲಾಗಿತ್ತು. ಆದರೆ ಟೆಲಿಕಾಂ ಕಂಪನಿಗಳ ಕೋರಿಕೆ ಮೇರೆಗೆ ಗಡವು (ನ.30ಕ್ಕೆ) ವಿಸ್ತರಿಸಿತು.

ಮೊಬೈಲ್‌ಗಳಿಗೆ ಬರುವ ಒಟಿಪಿ ವ್ಯವಸ್ಥೆ ನಿಂತುಹೋದರೆ ಆನ್‌ಲೈನ್‌ ಹಣಕಾಸು ವ್ಯವಹಾರ, ಡಿಜಿಟಲ್‌ ಬ್ಯಾಂಕಿಂಗ್‌ ಇನ್ನಿತರ ಸಮಸ್ಯೆಗಳು ಹೆಚ್ಚಾಗಿ ಇದರಿಂದ ಜನರಿಗೆ ತೊಡಕಾಗುತ್ತದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಟ್ರಾಯ್‌ನ ಹೊಸನಿಯಾಮವಳಿಗಳಿಗೆ ಜಿಯೊ, ವೊಡಾಪೋನ್‌,ಏರ್‌ಟೆಲ್‌,ಬಿಎಸ್‌ಎನ್‌ಎಲ್‌ ಇನ್ನು ಹಲವು ಕಂಪನಿಗಳು ಒಪ್ಪಿಗೆ ನೀಡಿಲ್ಲ. ಒಂದು ವೇಳೆ ಈ ಕಂಪನಿಗಳು ತಮ್ಮ ನಿರ್ಧಾರ ತಿಳಿಸದಿದ್ದರೆ ಒಟಿಪಿ ಸೇವೆಯಲ್ಲಿ ವ್ಯತ್ಯಯ ಆಗಬಹುದು ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

56 mins ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

2 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

2 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

2 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

3 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

3 hours ago