Categories: ಟೆಕ್‌

OTP ಬಂದ್? : ಟೆಲಿಕಾಂ ಕಂಪನಿಗಳಿಗೆ ಎಚ್ಚರಿಕೆ ನೀಡಿದ ಟ್ರಾಯ್‌

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ OTP ಗಳ ಮೂಲಕ ಹಣ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಕಾರಣ ಭಾರತೀಯ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರ (TRAI) ಹೊಸ ನಿಯಮಗಳನ್ನು ಜಾರಿಮಾಡಲು ನಿರ್ಧರಿಸಿದೆ.

ಮೊಬೈಲ್‌ಗಳಿಗೆ ಬರುವ ಒಟಿಪಿ (one time password)ಗಳ ಮೂಲ ಪತ್ತೆ ಮಾಡಲು, ಟ್ರಾಯ್‌ ಹೊಸ ನಿಯಮಗಳನ್ನು ರೂಪಿಸಿದೆ. ಈ ನಿಯಮಾವಳಿಗಳಿಗೆ ದೇಶಿಯ ಟೆಲಿಕಾಂ ಕಂಪನಿಗಳು ಇದೇ ನವೆಂಬರ್‌ 30ರೊಳಗೆ ಒಪ್ಪಿಗೆ ಸೂಚಿಸಬೇಕಿದೆ.

ಟ್ರಾಯ್‌ ನೀಡಿರುವ ಗಡುವಿನೊಳಗೆ ಟೆಲಿಕಾಂ ಕಂಪನಿಗಳು ಒಪ್ಪಿಗೆ ನೀಡದೆ ಇದ್ದರೆ ಡಿಸೆಂಬರ್‌ 1ರಿಂದ ಮೊಬೈಲ್‌ ಪೋನ್‌ಗಳಿಗೆ ಒಟಿಪಿಗಳು ಬರುವುದಿಲ್ಲ ಎಂದು ವರದಿಯಾಗಿದೆ.

ಈ ಹಿಂದೆ ಅಕ್ಟೋಬರ್‌ 31 ರ ವರೆಗೆ ಗಡುವು ನೀಡಲಾಗಿತ್ತು. ಆದರೆ ಟೆಲಿಕಾಂ ಕಂಪನಿಗಳ ಕೋರಿಕೆ ಮೇರೆಗೆ ಗಡವು (ನ.30ಕ್ಕೆ) ವಿಸ್ತರಿಸಿತು.

ಮೊಬೈಲ್‌ಗಳಿಗೆ ಬರುವ ಒಟಿಪಿ ವ್ಯವಸ್ಥೆ ನಿಂತುಹೋದರೆ ಆನ್‌ಲೈನ್‌ ಹಣಕಾಸು ವ್ಯವಹಾರ, ಡಿಜಿಟಲ್‌ ಬ್ಯಾಂಕಿಂಗ್‌ ಇನ್ನಿತರ ಸಮಸ್ಯೆಗಳು ಹೆಚ್ಚಾಗಿ ಇದರಿಂದ ಜನರಿಗೆ ತೊಡಕಾಗುತ್ತದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಟ್ರಾಯ್‌ನ ಹೊಸನಿಯಾಮವಳಿಗಳಿಗೆ ಜಿಯೊ, ವೊಡಾಪೋನ್‌,ಏರ್‌ಟೆಲ್‌,ಬಿಎಸ್‌ಎನ್‌ಎಲ್‌ ಇನ್ನು ಹಲವು ಕಂಪನಿಗಳು ಒಪ್ಪಿಗೆ ನೀಡಿಲ್ಲ. ಒಂದು ವೇಳೆ ಈ ಕಂಪನಿಗಳು ತಮ್ಮ ನಿರ್ಧಾರ ತಿಳಿಸದಿದ್ದರೆ ಒಟಿಪಿ ಸೇವೆಯಲ್ಲಿ ವ್ಯತ್ಯಯ ಆಗಬಹುದು ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

11 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

11 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

15 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago