ಬೆಂಗಳೂರು: ಇತ್ತೀಚಿನ ದಿನಗಳಲ್ಲಿ OTP ಗಳ ಮೂಲಕ ಹಣ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಕಾರಣ ಭಾರತೀಯ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರ (TRAI) ಹೊಸ ನಿಯಮಗಳನ್ನು ಜಾರಿಮಾಡಲು ನಿರ್ಧರಿಸಿದೆ.
ಮೊಬೈಲ್ಗಳಿಗೆ ಬರುವ ಒಟಿಪಿ (one time password)ಗಳ ಮೂಲ ಪತ್ತೆ ಮಾಡಲು, ಟ್ರಾಯ್ ಹೊಸ ನಿಯಮಗಳನ್ನು ರೂಪಿಸಿದೆ. ಈ ನಿಯಮಾವಳಿಗಳಿಗೆ ದೇಶಿಯ ಟೆಲಿಕಾಂ ಕಂಪನಿಗಳು ಇದೇ ನವೆಂಬರ್ 30ರೊಳಗೆ ಒಪ್ಪಿಗೆ ಸೂಚಿಸಬೇಕಿದೆ.
ಟ್ರಾಯ್ ನೀಡಿರುವ ಗಡುವಿನೊಳಗೆ ಟೆಲಿಕಾಂ ಕಂಪನಿಗಳು ಒಪ್ಪಿಗೆ ನೀಡದೆ ಇದ್ದರೆ ಡಿಸೆಂಬರ್ 1ರಿಂದ ಮೊಬೈಲ್ ಪೋನ್ಗಳಿಗೆ ಒಟಿಪಿಗಳು ಬರುವುದಿಲ್ಲ ಎಂದು ವರದಿಯಾಗಿದೆ.
ಈ ಹಿಂದೆ ಅಕ್ಟೋಬರ್ 31 ರ ವರೆಗೆ ಗಡುವು ನೀಡಲಾಗಿತ್ತು. ಆದರೆ ಟೆಲಿಕಾಂ ಕಂಪನಿಗಳ ಕೋರಿಕೆ ಮೇರೆಗೆ ಗಡವು (ನ.30ಕ್ಕೆ) ವಿಸ್ತರಿಸಿತು.
ಮೊಬೈಲ್ಗಳಿಗೆ ಬರುವ ಒಟಿಪಿ ವ್ಯವಸ್ಥೆ ನಿಂತುಹೋದರೆ ಆನ್ಲೈನ್ ಹಣಕಾಸು ವ್ಯವಹಾರ, ಡಿಜಿಟಲ್ ಬ್ಯಾಂಕಿಂಗ್ ಇನ್ನಿತರ ಸಮಸ್ಯೆಗಳು ಹೆಚ್ಚಾಗಿ ಇದರಿಂದ ಜನರಿಗೆ ತೊಡಕಾಗುತ್ತದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.
ಟ್ರಾಯ್ನ ಹೊಸನಿಯಾಮವಳಿಗಳಿಗೆ ಜಿಯೊ, ವೊಡಾಪೋನ್,ಏರ್ಟೆಲ್,ಬಿಎಸ್ಎನ್ಎಲ್ ಇನ್ನು ಹಲವು ಕಂಪನಿಗಳು ಒಪ್ಪಿಗೆ ನೀಡಿಲ್ಲ. ಒಂದು ವೇಳೆ ಈ ಕಂಪನಿಗಳು ತಮ್ಮ ನಿರ್ಧಾರ ತಿಳಿಸದಿದ್ದರೆ ಒಟಿಪಿ ಸೇವೆಯಲ್ಲಿ ವ್ಯತ್ಯಯ ಆಗಬಹುದು ಎನ್ನಲಾಗಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…