ಟೆಕ್‌

ವಿಶೇಷ ವಿನ್ಯಾಸದ ಸ್ಟಾರ್‌ ಬಾಯ್‌ 6

ಉತ್ತಮ ವಿನ್ಯಾಸದ ಇಯರ್‌ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ನು-ರಿಪಬ್ಲಿಕ್ ಇತ್ತೀಚೆಗೆ ಸ್ಟಾರ್‌ಬಾಯ್ ೬ ವೈರ್‌ಲೆಸ್ ಹೆಡ್‌ಫೋನ್ ಬಿಡುಗಡೆ ಮಾಡಿದೆ.

ಈ ಹೆಡ್‌ಫೋನ್ ಉತ್ತಮ ಧ್ವನಿ ಹೊರಹೊಮ್ಮಿಸುವ ಸಾಮರ್ಥ್ಯ ಹೊಂದಿದ್ದು ಗೇಮಿಂಗ್ ಪ್ರಿಯರಿಗೂ, ಸಂಗೀತ ಪ್ರಿಯರಿಗೂ ಅನುಕೂಲಕರವಾಗಿದೆ.

ಸ್ಟಾರ್‌ಬಾಯ್ ೬ ವೈರ್‌ಲೆಸ್ ಹೆಡ್ ಫೋನ್‌ನ ವಿನ್ಯಾಸ ಆಕರ್ಷಕವಾಗಿದ್ದು, ಇದರಲ್ಲಿ ಬೇಕಾದಾಗ ಹೊರಗೆಳೆದು ನಂತರ ಮಡಚಬಲ್ಲ ಮೈಕ್ ಪೀಸ್ ಮತ್ತು ಎಲ್‌ಇಡಿ ದೀಪದ ವಿನ್ಯಾಸವನ್ನು ಅಳವಡಿಸಲಾಗಿದೆ. ಈ ಹೆಡ್‌ಫೋನ್ ಹಗುರವಾಗಿದ್ದು, ಫೋನ್ ಕರೆಗಳು, ವಿಡಿಯೋ ಮೀಟಿಂಗ್‌ಗಳ ಸಂದರ್ಭದಲ್ಲಿ ಸ್ಪಷ್ಟವಾದ ಮಾತು ಕೇಳುತ್ತದೆ. ಇನ್ನು ಇದರಲ್ಲಿ ಎಕ್ಸ್-ಬೇಸ್ ತಂತ್ರಜ್ಞಾನದ ಮೂಲಕವಾಗಿ ೩ಡಿ ಎಫೆಕ್ಟ್ ಇರುವ ನಾದವನ್ನು ಹೆಚ್ಚು ಬೇಸ್ ಧ್ವನಿಯ ಮೂಲಕ ಆನಂದಿಸಬಹುದು. ಅಲ್ಲದೆ ಇದರಲ್ಲಿ ಮ್ಯೂಸಿಕ್ ಮತ್ತು ಗೇಮಿಂಗ್‌ಗಾಗಿ ಪ್ರತ್ಯೇಕವಾದ ಮೋಡ್ ಗಳಿವೆ.

ಸುತ್ತಮುತ್ತಲಿನ ಧ್ವನಿಯು ಕಿವಿಗೆ ಕೇಳಿಸದಂತೆ ಇಯರ್‌ಕಪ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಇನ್ನು ಈ ಹೆಡ್ ಫೋನ್ ಉತ್ತಮ ಬ್ಯಾಟರಿ ಮತ್ತು ಸಂಪರ್ಕ ವಿನ್ಯಾಸ ಹೊಂದಿದ್ದು, ಒಮ್ಮೆ ಚಾರ್ಜ್ ಮಾಡಿದರೆ (ಶೂನ್ಯದಿಂದ ಪೂರ್ತಿ ಚಾರ್ಜ್ ಆಗಲು ಸುಮಾರು ಒಂದೂವರೆ ಗಂಟೆ ಬೇಕಾಗುತ್ತದೆ. ) ನಿರಂತರವಾಗಿ ಸುಮಾರು ೩೦ ಗಂಟೆಗಳ ಕಾಲ ಬಳಸಬಹುದಾಗಿದೆ. ಬ್ಲೂಟೂತ್ ನೆರವಿನಿಂದ ಎರಡು ಸಾಧನಗಳನ್ನು ಏಕಕಾಲಕ್ಕೆ ಪೇರಿಂಗ್ ಮಾಡುವ ಮೂಲಕ ಈ ಹೆಡ್‌ಫೋನ್‌ಗೆ ಸಂಪರ್ಕಿಸಬಹುದಾಗಿದೆ.

ಇದರ ಈಗಿನ ಬೆಲೆ ೨,೪೯೯ ರೂ. ಗಳಾಗಿದ್ದು, ಪ್ರಮುಖ ಆನ್‌ಲೈನ್ ವಾಣಿಜ್ಯ ತಾಣಗಳಲ್ಲಿ ಲಭ್ಯವಿದೆ.

 

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

11 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

12 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

12 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

12 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

13 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

13 hours ago