Categories: Uncategorized

ದೇಶಕ್ಕಾಗಿ ರಾಜ್ಯದಿಂದ ಕನಿಷ್ಠ 24 ಸೀಟುಗಳನ್ನಾದರು ಗೆಲ್ಲಬೇಕು: ಎಚ್‌.ಡಿ ದೇವೇಗೌಡ!

ಮೈಸೂರು: ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿಂದು (ಏ.೧೪) ನಡೆದ ಸಮಾವೇಶದಲ್ಲಿ ಮಾಜಿ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರು ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 24 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿ ಕೈ ಬಲಪಡಿಸಲಾಗುವುದು ಎಂದು ಹೇಳಿದ್ದಾರೆ.

ಇಡೀ ರಾಜ್ಯದಲ್ಲಿ ಜೆಡಿಎಸ್‌ ಕುಮಾರಸ್ವಾಮಿ ಅವರ ಪಂಚರತ್ನ ಕಾರ್ಯಕ್ರಮವನ್ನು ಯಶಸ್ವಿ ಮಾಡಿದ್ದರು. ಆದರೆ, ಮತದಾನಕ್ಕೂ ಮುನ್ನ ಒಂದೆರಡು ದಿನಗಳ ಮುಂಚೆ ಮಹಿಳೆಯರಿಗೆ 2,000 ರೂ. ಗ್ಯಾರಂಟಿ ಕೊಡ್ತೇವೆ ಎಂದು 5 ಗ್ಯಾರಂಟಿಗಳನ್ನು ಕೊಟ್ಟು ರಾಜ್ಯದಲ್ಲಿ 136 ಸ್ಥಾನಗಳನ್ನು ಗೆದ್ದಂತಹ ಎರಡು ಮಹನೀಯರು ಇದ್ದಾರೆ. ಅವರು ಇಂಡಿಯಾ ಮೈತ್ರಿಕೂಟ ಬಿಟ್ಟು ಎನ್‌ಡಿಎ ಸೇರಿದ್ದಾರೆ ಎಂಥಾ ದುರ್ದೈವಾ ಎನ್ನುತ್ತಿದ್ದಾರೆ. ಅದರೆ ನನ್ನ ೯೧ ವಯಸ್ಸಿನಲ್ಲಿ 64 ವರ್ಷದ ರಾಜಕೀಯ ಜೀವನದಲ್ಲಿ ಈ ದೇಶಕ್ಕೆ ಕೀರ್ತಿ ತದುಕೊಟ್ಟ ವ್ಯಕ್ತಿ ನನ್ನ ಪಕ್ಕದಲ್ಲಿದ್ದಾರೆ ಅವರೇ ನರೇಂದ್ರ ಮೋದಿ, ನನ್ನ ತಲೆಯಲ್ಲಿ ಬುದ್ಧಿ ಇಲ್ದೆನೇ ಕುಮಾರಸ್ವಾಮಿ ನಾ ಹೋಗು ಎಂದು ಹೇಳಿಲ್ಲ ಎಂದು ಕಿಡಿಕಾರಿದರು.

ನನ್ನ ಪಕ್ಕದಲ್ಲಿ ಯದುವೀರ್ ಅವರು ಕುಳಿತಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರು ರಾಜಶ್ರೀ ಅವರು ರಾಜ್ಯಕ್ಕಾಗಿ ಏನೆಲ್ಲಾ ಮಾಡುತ್ತಿದ್ದಾರೆ. ಎರಡು ಮಹಾನುಭಾವರು ಈಗ ಇಡೀ ರಾಜ್ಯವನ್ನು ಆಳುತ್ತಿದ್ದಾರೆ. ಆ ಪುಣ್ಯಾತ್ಮರಿಗೆ ನಮೋ ನಮಃ. ಕೇವಲ ಒಬ್ಬ ರಾಜ್ಯದ ಮುಖ್ಯಮಂತ್ರಿ ಕೇವಲ 6 ಕೋಟಿ ಜನರ ಮುಖ್ಯಮಂತ್ರಿಯಾಗಿ, 150 ಕೋಟಿ ಜನರ ಪ್ರಧಾನಮಂತ್ರಿ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೊಶ ವ್ಯಕ್ತಪಡಿಸಿದರು.

ನನ್ನ ಪಕ್ಕದಲ್ಲಿ ಯದುವೀರ್ ಅವರು ಕುಳಿತಿದ್ದಾರೆ. ರಾಜಶ್ರೀ ಅವರು ರಾಜ್ಯಕ್ಕಾಗಿ ಏನೆಲ್ಲಾ ಮಾಡಿದ್ದಾರೆ ಎಂಬುದನ್ನು ನೆನೆಯಬೇಕು. ಆದರೇ, ಎರಡು ಮಹಾನುಭಾವರು ಈಗ ಇಡೀ ರಾಜ್ಯವನ್ನು ಆಳುತ್ತಿದ್ದಾರೆ. ಆ ಪುಣ್ಯಾತ್ಮರಿಗೆ ನಮೋ ನಮಃ. ಅದರಲ್ಲಿ ಒಬ್ಬ ಕೇವಲ 6 ಕೋಟಿ ಜನರ ಮುಖ್ಯಮಂತ್ರಿಯಾಗಿ, 150 ಕೋಟಿ ಜನರ ಪ್ರಧಾನಮಂತ್ರಿ ಬಗ್ಗೆ ಮಾತನಾಡುತ್ತಾರೆ.

ಮೈತ್ರಿಯಿಂದ ನನಗೆ ಮೂರು ಸೀಟ್‌ ಮಾತ್ರ ಸಿಕ್ಕಿದೆ ಎಂದಲ್ಲ, ರಾಜ್ಯದ ಒಟ್ಟು ೨೮ ಸೀಟ್‌ಗಳು ನನಗೆ ಇದೆ. ರಾಯಚೂರು, ಬೀದರ್‌ ಎಲ್ಲೆ ಕರೆದು ಪ್ರಚಾರಕ್ಕಾಗಿ ಹೋಗುತ್ತೇನೆ. ಈ ರಾಜ್ಯಕ್ಕಾಗಿ ೬೦ ವರ್ಷ ದುಡಿದಿದ್ದೇನೆ. ಇಲ್ಲಿಂದ ಕನಿಷ್ಠ ೨೪ ಕ್ಷೇತ್ರ ಗೆದ್ದು ಮೋದಿ ಅವರಿಗೆ ಸಲ್ಲಿಸುತ್ತೇವೆ. ಜೆಡಿಎಸ್‌ ಕೇವಲ ಮೂರಲ್ಲ, ಎನ್‌ಡಿಎದ ೨೮ ಕ್ಷೇತ್ರವಾಗಿದೆ. ಇವಗಳನ್ನು ಗೆಲ್ಲುವುದು ಬಿಎಸ್‌ವೈ ಹಾಗೂ ನಮ್ಮ ಕೆಲಸವಾಗಿದೆ ಎಂದು ಹೇಳಿದರು.

ರಾಜ್ಯದ ಜನತೆಯಲ್ಲಿ ಕೈಮುಗಿದು ಕೇಳುತ್ತೇನೆ. ಈ ರಾಷ್ಟ್ರವನ್ನು ಬಲಯುತವಾಗಿ ಬೆಳೆಸುವ ಶಕ್ತಿ ಎನ್‌ಡಿಎ ಬಳಿಯಿದ್ದು, ಅದು ಕೇವಲ ನರೇಂದ್ರ ಮೋದಿ ಅವರು ಮಾತ್ರ. ಆದರೆ ಐಎನ್‌ಡಿಐಎ ದಲ್ಲಿ ಇಂತಹ ಶಕ್ತಿ ಇಲ್ಲ. ಅದಕ್ಕಾಗಿ ಯಾರು ತಪ್ಪು ತಿಳಿಯಬಾರದು. ಇದು ಬಿಜೆಪಿ ಪ್ರಶ್ನೆಯಲ್ಲ. ಎನ್‌ಡಿಎ ಕನಸು ೪೦೦ ಇದ್ದು, ರಾಜ್ಯದಿಂದ ನಾವು ಕನಿಷ್ಠ ೨೪ ಸ್ಥಾನಗಳನ್ನಾದರು ಗೆದ್ದು ಮೋದಿಗೆ ಕರ್ನಾಟಕದಿಂದ ಕೊಡುಗೆ ನೀಡಬೇಕು. ಇದನ್ನು ಕನ್ನಡ ಜನತೆ ಮಾನ್ಯ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

44 mins ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

1 hour ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

1 hour ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

5 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

7 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

7 hours ago