Categories: Uncategorized

ದೇಶಕ್ಕಾಗಿ ರಾಜ್ಯದಿಂದ ಕನಿಷ್ಠ 24 ಸೀಟುಗಳನ್ನಾದರು ಗೆಲ್ಲಬೇಕು: ಎಚ್‌.ಡಿ ದೇವೇಗೌಡ!

ಮೈಸೂರು: ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿಂದು (ಏ.೧೪) ನಡೆದ ಸಮಾವೇಶದಲ್ಲಿ ಮಾಜಿ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರು ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 24 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿ ಕೈ ಬಲಪಡಿಸಲಾಗುವುದು ಎಂದು ಹೇಳಿದ್ದಾರೆ.

ಇಡೀ ರಾಜ್ಯದಲ್ಲಿ ಜೆಡಿಎಸ್‌ ಕುಮಾರಸ್ವಾಮಿ ಅವರ ಪಂಚರತ್ನ ಕಾರ್ಯಕ್ರಮವನ್ನು ಯಶಸ್ವಿ ಮಾಡಿದ್ದರು. ಆದರೆ, ಮತದಾನಕ್ಕೂ ಮುನ್ನ ಒಂದೆರಡು ದಿನಗಳ ಮುಂಚೆ ಮಹಿಳೆಯರಿಗೆ 2,000 ರೂ. ಗ್ಯಾರಂಟಿ ಕೊಡ್ತೇವೆ ಎಂದು 5 ಗ್ಯಾರಂಟಿಗಳನ್ನು ಕೊಟ್ಟು ರಾಜ್ಯದಲ್ಲಿ 136 ಸ್ಥಾನಗಳನ್ನು ಗೆದ್ದಂತಹ ಎರಡು ಮಹನೀಯರು ಇದ್ದಾರೆ. ಅವರು ಇಂಡಿಯಾ ಮೈತ್ರಿಕೂಟ ಬಿಟ್ಟು ಎನ್‌ಡಿಎ ಸೇರಿದ್ದಾರೆ ಎಂಥಾ ದುರ್ದೈವಾ ಎನ್ನುತ್ತಿದ್ದಾರೆ. ಅದರೆ ನನ್ನ ೯೧ ವಯಸ್ಸಿನಲ್ಲಿ 64 ವರ್ಷದ ರಾಜಕೀಯ ಜೀವನದಲ್ಲಿ ಈ ದೇಶಕ್ಕೆ ಕೀರ್ತಿ ತದುಕೊಟ್ಟ ವ್ಯಕ್ತಿ ನನ್ನ ಪಕ್ಕದಲ್ಲಿದ್ದಾರೆ ಅವರೇ ನರೇಂದ್ರ ಮೋದಿ, ನನ್ನ ತಲೆಯಲ್ಲಿ ಬುದ್ಧಿ ಇಲ್ದೆನೇ ಕುಮಾರಸ್ವಾಮಿ ನಾ ಹೋಗು ಎಂದು ಹೇಳಿಲ್ಲ ಎಂದು ಕಿಡಿಕಾರಿದರು.

ನನ್ನ ಪಕ್ಕದಲ್ಲಿ ಯದುವೀರ್ ಅವರು ಕುಳಿತಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರು ರಾಜಶ್ರೀ ಅವರು ರಾಜ್ಯಕ್ಕಾಗಿ ಏನೆಲ್ಲಾ ಮಾಡುತ್ತಿದ್ದಾರೆ. ಎರಡು ಮಹಾನುಭಾವರು ಈಗ ಇಡೀ ರಾಜ್ಯವನ್ನು ಆಳುತ್ತಿದ್ದಾರೆ. ಆ ಪುಣ್ಯಾತ್ಮರಿಗೆ ನಮೋ ನಮಃ. ಕೇವಲ ಒಬ್ಬ ರಾಜ್ಯದ ಮುಖ್ಯಮಂತ್ರಿ ಕೇವಲ 6 ಕೋಟಿ ಜನರ ಮುಖ್ಯಮಂತ್ರಿಯಾಗಿ, 150 ಕೋಟಿ ಜನರ ಪ್ರಧಾನಮಂತ್ರಿ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೊಶ ವ್ಯಕ್ತಪಡಿಸಿದರು.

ನನ್ನ ಪಕ್ಕದಲ್ಲಿ ಯದುವೀರ್ ಅವರು ಕುಳಿತಿದ್ದಾರೆ. ರಾಜಶ್ರೀ ಅವರು ರಾಜ್ಯಕ್ಕಾಗಿ ಏನೆಲ್ಲಾ ಮಾಡಿದ್ದಾರೆ ಎಂಬುದನ್ನು ನೆನೆಯಬೇಕು. ಆದರೇ, ಎರಡು ಮಹಾನುಭಾವರು ಈಗ ಇಡೀ ರಾಜ್ಯವನ್ನು ಆಳುತ್ತಿದ್ದಾರೆ. ಆ ಪುಣ್ಯಾತ್ಮರಿಗೆ ನಮೋ ನಮಃ. ಅದರಲ್ಲಿ ಒಬ್ಬ ಕೇವಲ 6 ಕೋಟಿ ಜನರ ಮುಖ್ಯಮಂತ್ರಿಯಾಗಿ, 150 ಕೋಟಿ ಜನರ ಪ್ರಧಾನಮಂತ್ರಿ ಬಗ್ಗೆ ಮಾತನಾಡುತ್ತಾರೆ.

ಮೈತ್ರಿಯಿಂದ ನನಗೆ ಮೂರು ಸೀಟ್‌ ಮಾತ್ರ ಸಿಕ್ಕಿದೆ ಎಂದಲ್ಲ, ರಾಜ್ಯದ ಒಟ್ಟು ೨೮ ಸೀಟ್‌ಗಳು ನನಗೆ ಇದೆ. ರಾಯಚೂರು, ಬೀದರ್‌ ಎಲ್ಲೆ ಕರೆದು ಪ್ರಚಾರಕ್ಕಾಗಿ ಹೋಗುತ್ತೇನೆ. ಈ ರಾಜ್ಯಕ್ಕಾಗಿ ೬೦ ವರ್ಷ ದುಡಿದಿದ್ದೇನೆ. ಇಲ್ಲಿಂದ ಕನಿಷ್ಠ ೨೪ ಕ್ಷೇತ್ರ ಗೆದ್ದು ಮೋದಿ ಅವರಿಗೆ ಸಲ್ಲಿಸುತ್ತೇವೆ. ಜೆಡಿಎಸ್‌ ಕೇವಲ ಮೂರಲ್ಲ, ಎನ್‌ಡಿಎದ ೨೮ ಕ್ಷೇತ್ರವಾಗಿದೆ. ಇವಗಳನ್ನು ಗೆಲ್ಲುವುದು ಬಿಎಸ್‌ವೈ ಹಾಗೂ ನಮ್ಮ ಕೆಲಸವಾಗಿದೆ ಎಂದು ಹೇಳಿದರು.

ರಾಜ್ಯದ ಜನತೆಯಲ್ಲಿ ಕೈಮುಗಿದು ಕೇಳುತ್ತೇನೆ. ಈ ರಾಷ್ಟ್ರವನ್ನು ಬಲಯುತವಾಗಿ ಬೆಳೆಸುವ ಶಕ್ತಿ ಎನ್‌ಡಿಎ ಬಳಿಯಿದ್ದು, ಅದು ಕೇವಲ ನರೇಂದ್ರ ಮೋದಿ ಅವರು ಮಾತ್ರ. ಆದರೆ ಐಎನ್‌ಡಿಐಎ ದಲ್ಲಿ ಇಂತಹ ಶಕ್ತಿ ಇಲ್ಲ. ಅದಕ್ಕಾಗಿ ಯಾರು ತಪ್ಪು ತಿಳಿಯಬಾರದು. ಇದು ಬಿಜೆಪಿ ಪ್ರಶ್ನೆಯಲ್ಲ. ಎನ್‌ಡಿಎ ಕನಸು ೪೦೦ ಇದ್ದು, ರಾಜ್ಯದಿಂದ ನಾವು ಕನಿಷ್ಠ ೨೪ ಸ್ಥಾನಗಳನ್ನಾದರು ಗೆದ್ದು ಮೋದಿಗೆ ಕರ್ನಾಟಕದಿಂದ ಕೊಡುಗೆ ನೀಡಬೇಕು. ಇದನ್ನು ಕನ್ನಡ ಜನತೆ ಮಾನ್ಯ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…

12 hours ago

ಜಿಲ್ಲಾಧಿಕಾರಿ ಆದೇಶ ಮೀರಿ ಶಾಲೆ ಸಮಯದಲ್ಲಿ ಸಂಚಾರ: 6 ಟಿಪ್ಪರ್ ವಶ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ…

12 hours ago

ಗೃಹಲಕ್ಷ್ಮೀ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್‌

ಬೆಂಗಳೂರು: ಕರ್ನಾಟಕ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ…

14 hours ago

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸೂರಜ್ ಹೆಗ್ಡೆ ಅಂತ್ಯಕ್ರಿಯೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು…

15 hours ago

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ: ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಎಚ್‌ಡಿಕೆ

ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ…

15 hours ago

ಮಂಡ್ಯ: ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್‌, ತಾಯಿ ಜ್ಯೋತಿ…

16 hours ago