Uncategorized

91ಕ್ಕೆ7 ನಂತರ 292 ರನ್‌!:ಭವಿಷ್ಯದಲ್ಲಿ ನನ್ನ ಮಕ್ಕಳಿಗೆ ಹೇಗೆ ವಿವರಿಸಲಿ:ಮ್ಯಾಕ್ಸ್ ವೆಲ್

ಮುಂಬೈ : ”ಆಸ್ಟ್ರೇಲಿಯ ಒಂದು ಹಂತದಲ್ಲಿ 91ಕ್ಕೆ 7 ವಿಕೆಟ್ ಕಳೆದುಕೊಂಡ ನಂತರ 292 ರನ್‌ಗಳನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ ಎಂದು ಭವಿಷ್ಯದಲ್ಲಿ ನನ್ನ ಮಕ್ಕಳಿಗೆ ನಾನು ಹೇಗೆ ವಿವರಿಸಲಿ” ಎಂದು ಸ್ಮರಣೀಯ ದ್ವಿಶತಕ ಸಿಡಿಸಿ ಅಫ್ಘಾನ್ ವಿರುದ್ಧ ರೋಚಕ ಗೆಲುವಿಗೆ ಕಾರಣವಾದ ಗ್ಲೇನ್ ಮ್ಯಾಕ್ಸ್ ವೆಲ್ ಸಂತಸ ಹಂಚಿಕೊಂಡಿದ್ದಾರೆ.

ಪಂದ್ಯದ ನಂತರ ಪ್ರಸ್ತುತಿ ಸಮಾರಂಭದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮ್ಯಾಕ್ಸ್ ವೆಲ್ , ”ಇಂದಿನ ಪಾಲುದಾರಿಕೆಯಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ 68 ಎಸೆತಗಳಲ್ಲಿ 12 ರನ್ ಗಳಿಸಿದರು. ಅಕ್ಷರಶಃ ಬೆನ್ನಿನ ಮೇಲೆ ತಮ್ಮ ತಂಡದ ಭಾರವನ್ನು ಹೊತ್ತಿದ್ದರು ಎಂದರು.

ಇಂದು ಫೀಲ್ಡಿಂಗ್ ಮಾಡುವಾಗ ಹೆಚ್ಚಿನ ತಾಪದಲ್ಲಿ ಹೆಚ್ಚು ಕಸರತ್ತು ಮಾಡಿಲ್ಲ, ನನ್ನ ಕಾಲುಗಳ ನೋವಿನಿಂದ ಹಿಂದೆ ಉಳಿಯಲು ನಿರ್ಧರಿಸಿದ್ದೆ. 92 ಕ್ಕೆ 7 ವಿಕೆಟ್ ಕಳೆದುಕೊಂಡ ಸಂದರ್ಭದಲ್ಲಿ ಸಾಧ್ಯವಾದಷ್ಟು ಬ್ಯಾಟಿಂಗ್ ಗೆ ಅಂಟಿಕೊಳ್ಳಲು ಯೋಚಿಸಿದೆ.ಸಕಾರಾತ್ಮಕವಾಗಿ ನನ್ನ ಹೊಡೆತಗಳನ್ನು ಆಡಲು ನೋಡಿದೆ. ಎಲ್ಬಿಡಬ್ಲ್ಯೂ ಸ್ಟಂಪ್‌ಗಳಿಂದ ಸ್ವಲ್ಪ ಮೇಲಕ್ಕೆ ಹೋಗುತ್ತಿತ್ತು. ಬಹುಶಃ ಅದು ನನ್ನನ್ನು ಮುಂದುವರಿಯುವಂತೆ ಮಾಡಿತು ಎಂದರು.

ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಪತ್ನಿ ಭಾರತ ಮೂಲದವರಾಗಿದ್ದು ಈ ವರ್ಷ ಗಂಡು ಮಗುವನ್ನು ಪಡೆದಿದ್ದು, ಪುತ್ರನಿಗೆ ಲೋಗನ್ ಮೇವರಿಕ್ ಮ್ಯಾಕ್ಸ್‌ವೆಲ್ ಎಂದು ಹೆಸರಿಸಿಟ್ಟಿದ್ದಾರೆ.

ಏಕದಿನ ಪಂದ್ಯದಲ್ಲಿ 7ನೇ ಅಥವಾ ಅದಕ್ಕಿಂತ ಕೆಳಗಿನ ವಿಕೆಟ್‌ಗೆ ಅತ್ಯಧಿಕ ಜತೆಯಾಟ ಅಫ್ಘಾನ್ ವಿರುದ್ದದ ಪಂದ್ಯದಲ್ಲಿ ದಾಖಲಾಗಿದ್ದು (201*) ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಪ್ಯಾಟ್ ಕಮ್ಮಿನ್ಸ್ ಅವರ ಜತೆಯಾಟವಾಗಿದೆ. ಪ್ಯಾಟ್ ಕಮ್ಮಿನ್ಸ್ (17.64 ) ಅವರು ವಿಶ್ವಕಪ್ ಇನ್ನಿಂಗ್ಸ್‌ನಲ್ಲಿ ಕಡಿಮೆ ಸ್ಟ್ರೈಕ್-ರೇಟ್ (ಕನಿಷ್ಠ 10 ರನ್ ಸ್ಕೋರ್) ದಾಖಲಿಸಿದ್ದಾರೆ. ಜಿಂಬಾಬ್ವೆ ಯ ಜ್ಯಾಕ್ ಹೆರಾನ್ ಅವರು ವೆಸ್ಟ್ ಇಂಡೀಸ್ ವಿರುದ್ಧ 1983 ರಲ್ಲಿ ವೋರ್ಸೆಸ್ಟರ್ ನಲ್ಲಿ (16.43 ಸ್ಟ್ರೈಕ್-ರೇಟ್) ಹೊಂದಿದ್ದರು.

ಮ್ಯಾಕ್ಸ್ ವೆಲ್ 128 ಎಸೆತಗಳಿಂದ 201 ರನ್ ಬಾರಿಸಿ ವಿಶ್ವಕಪ್ ದ್ವಿಶತಕದ ಸಂಭ್ರಮ ಆಚರಿಸಿದರು. ಬರೋಬ್ಬರಿ 21 ಬೌಂಡರಿ ಮತ್ತು 10 ಆಕರ್ಷಕ ಸಿಕ್ಸರ್ ಬಾರಿಸಿದ್ದರು.

andolanait

Recent Posts

ರೀಲ್ ಹುಚ್ಚಿಗೆ ಬಲಿಯಾದ ಒಂದು ಅಮಾಯಕ ಜೀವ

ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…

3 hours ago

ಕಣಗಾಲ್ ಪುಟ್ಟಣ್ಣನವರ ಕರುಣಾಜನಕ ಮನೆ

ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…

3 hours ago

ಮುದ್ದಿನ ಬೆಕ್ಕುಗಳಿಗೆ ಬೆಚ್ಚಗಿನ ಸಂಗ್ರಹಾಲಯ

ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಉತ್ತರದ ಕಾಲೇಜುಗಳ ‘ಚಹ ಕಪ್ಪಿನಲ್ಲಿ ಬಿರುಗಾಳಿ’

ತಾಯಿಯೇ ಮೊದಲ ಶಿಕ್ಷಕಿ; ಮನೆಯೇ ಮೊದಲ ಪಾಠ ಶಾಲೆ’ ಎನ್ನುವ ನಾಣ್ಣುಡಿಯನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ದಲಿತರಲ್ಲದ ಬಲಿಷ್ಠ ಜಾತಿಗಳ ಅಷ್ಟೇ…

3 hours ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ಖಾದಿ ಉಡುಪು ಕಡ್ಡಾಯ ಶ್ಲಾಘನೀಯ

ಖಾದಿ ಉದ್ಯಮಕ್ಕೆ ಹೆಚ್ಚಿನ ಅವಕಾಶ ಹಾಗೂ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ, ಸರಕಾರಿ ನೌಕರರು ಇನ್ನು ಮುಂದೆ ಪ್ರತಿ…

3 hours ago