Uncategorized

91ಕ್ಕೆ7 ನಂತರ 292 ರನ್‌!:ಭವಿಷ್ಯದಲ್ಲಿ ನನ್ನ ಮಕ್ಕಳಿಗೆ ಹೇಗೆ ವಿವರಿಸಲಿ:ಮ್ಯಾಕ್ಸ್ ವೆಲ್

ಮುಂಬೈ : ”ಆಸ್ಟ್ರೇಲಿಯ ಒಂದು ಹಂತದಲ್ಲಿ 91ಕ್ಕೆ 7 ವಿಕೆಟ್ ಕಳೆದುಕೊಂಡ ನಂತರ 292 ರನ್‌ಗಳನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ ಎಂದು ಭವಿಷ್ಯದಲ್ಲಿ ನನ್ನ ಮಕ್ಕಳಿಗೆ ನಾನು ಹೇಗೆ ವಿವರಿಸಲಿ” ಎಂದು ಸ್ಮರಣೀಯ ದ್ವಿಶತಕ ಸಿಡಿಸಿ ಅಫ್ಘಾನ್ ವಿರುದ್ಧ ರೋಚಕ ಗೆಲುವಿಗೆ ಕಾರಣವಾದ ಗ್ಲೇನ್ ಮ್ಯಾಕ್ಸ್ ವೆಲ್ ಸಂತಸ ಹಂಚಿಕೊಂಡಿದ್ದಾರೆ.

ಪಂದ್ಯದ ನಂತರ ಪ್ರಸ್ತುತಿ ಸಮಾರಂಭದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮ್ಯಾಕ್ಸ್ ವೆಲ್ , ”ಇಂದಿನ ಪಾಲುದಾರಿಕೆಯಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ 68 ಎಸೆತಗಳಲ್ಲಿ 12 ರನ್ ಗಳಿಸಿದರು. ಅಕ್ಷರಶಃ ಬೆನ್ನಿನ ಮೇಲೆ ತಮ್ಮ ತಂಡದ ಭಾರವನ್ನು ಹೊತ್ತಿದ್ದರು ಎಂದರು.

ಇಂದು ಫೀಲ್ಡಿಂಗ್ ಮಾಡುವಾಗ ಹೆಚ್ಚಿನ ತಾಪದಲ್ಲಿ ಹೆಚ್ಚು ಕಸರತ್ತು ಮಾಡಿಲ್ಲ, ನನ್ನ ಕಾಲುಗಳ ನೋವಿನಿಂದ ಹಿಂದೆ ಉಳಿಯಲು ನಿರ್ಧರಿಸಿದ್ದೆ. 92 ಕ್ಕೆ 7 ವಿಕೆಟ್ ಕಳೆದುಕೊಂಡ ಸಂದರ್ಭದಲ್ಲಿ ಸಾಧ್ಯವಾದಷ್ಟು ಬ್ಯಾಟಿಂಗ್ ಗೆ ಅಂಟಿಕೊಳ್ಳಲು ಯೋಚಿಸಿದೆ.ಸಕಾರಾತ್ಮಕವಾಗಿ ನನ್ನ ಹೊಡೆತಗಳನ್ನು ಆಡಲು ನೋಡಿದೆ. ಎಲ್ಬಿಡಬ್ಲ್ಯೂ ಸ್ಟಂಪ್‌ಗಳಿಂದ ಸ್ವಲ್ಪ ಮೇಲಕ್ಕೆ ಹೋಗುತ್ತಿತ್ತು. ಬಹುಶಃ ಅದು ನನ್ನನ್ನು ಮುಂದುವರಿಯುವಂತೆ ಮಾಡಿತು ಎಂದರು.

ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಪತ್ನಿ ಭಾರತ ಮೂಲದವರಾಗಿದ್ದು ಈ ವರ್ಷ ಗಂಡು ಮಗುವನ್ನು ಪಡೆದಿದ್ದು, ಪುತ್ರನಿಗೆ ಲೋಗನ್ ಮೇವರಿಕ್ ಮ್ಯಾಕ್ಸ್‌ವೆಲ್ ಎಂದು ಹೆಸರಿಸಿಟ್ಟಿದ್ದಾರೆ.

ಏಕದಿನ ಪಂದ್ಯದಲ್ಲಿ 7ನೇ ಅಥವಾ ಅದಕ್ಕಿಂತ ಕೆಳಗಿನ ವಿಕೆಟ್‌ಗೆ ಅತ್ಯಧಿಕ ಜತೆಯಾಟ ಅಫ್ಘಾನ್ ವಿರುದ್ದದ ಪಂದ್ಯದಲ್ಲಿ ದಾಖಲಾಗಿದ್ದು (201*) ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಪ್ಯಾಟ್ ಕಮ್ಮಿನ್ಸ್ ಅವರ ಜತೆಯಾಟವಾಗಿದೆ. ಪ್ಯಾಟ್ ಕಮ್ಮಿನ್ಸ್ (17.64 ) ಅವರು ವಿಶ್ವಕಪ್ ಇನ್ನಿಂಗ್ಸ್‌ನಲ್ಲಿ ಕಡಿಮೆ ಸ್ಟ್ರೈಕ್-ರೇಟ್ (ಕನಿಷ್ಠ 10 ರನ್ ಸ್ಕೋರ್) ದಾಖಲಿಸಿದ್ದಾರೆ. ಜಿಂಬಾಬ್ವೆ ಯ ಜ್ಯಾಕ್ ಹೆರಾನ್ ಅವರು ವೆಸ್ಟ್ ಇಂಡೀಸ್ ವಿರುದ್ಧ 1983 ರಲ್ಲಿ ವೋರ್ಸೆಸ್ಟರ್ ನಲ್ಲಿ (16.43 ಸ್ಟ್ರೈಕ್-ರೇಟ್) ಹೊಂದಿದ್ದರು.

ಮ್ಯಾಕ್ಸ್ ವೆಲ್ 128 ಎಸೆತಗಳಿಂದ 201 ರನ್ ಬಾರಿಸಿ ವಿಶ್ವಕಪ್ ದ್ವಿಶತಕದ ಸಂಭ್ರಮ ಆಚರಿಸಿದರು. ಬರೋಬ್ಬರಿ 21 ಬೌಂಡರಿ ಮತ್ತು 10 ಆಕರ್ಷಕ ಸಿಕ್ಸರ್ ಬಾರಿಸಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago