Categories: Uncategorized

ವೈರಲ್‌ ಆಯ್ತು ಅಂಗಲಾಚಿ ರೇಣುಕಾಸ್ವಾಮಿ ಬೇಡಿಕೊಳ್ಳುತ್ತಿರುವ ಫೋಟೋ!

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿಗೆ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು ಅದರ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ.

ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು ಬೇಡಿಕೊಳ್ಳುತ್ತಿರುವ ಹಾಗೂ ನಿತ್ರಾಣಗೊಂಡು ಅಂಗಾತ ಮಲಗಿರುವ ಫೋಟೊಗಳು ಲಭ್ಯವಾಗಿವೆ.

ಈ ಪ್ರಕರಣದಲ್ಲಿ ನಟ ದರ್ಶನ್ ಅಲಿಯಾಸ್ ಡಿ ಬಾಸ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷ್ಯಗಳು ಸಿಕ್ಕಿದಂತೆ ಆಗಿದೆ.

ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೊ ಇದಾಗಿದೆ. ಮೈಮೇಲೆ ಗಾಯದ ಗುರುತುಗಳಿವೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಇನ್ನ ಮುಂದೆ ಪವಿತ್ರಾಗೆ ಸಂದೇಶ ಕಳುಹಿಸುವುದಿಲ್ಲ.‌ ತಪ್ಪಾಯಿತು ಬಿಡಿ ಎಂದು ಪರಿಪರಿಯಾಗಿ ಕ್ಷಮೆ ಕೋರಿದ್ದರೂ ಆರೋಪಿಗಳ ಮನಸ್ಸು ಕರಗಿರಲಿಲ್ಲ. ಮನಸೋಇಚ್ಛೆ ಹಲ್ಲೆ ನಡೆಸಿದ್ದರು ಎಂದು ಗೊತ್ತಾಗಿದೆ. ಈ ಅಂಶಗಳನ್ನೂ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಕೃತ್ಯದ ವೇಳೆ ಪವಿತ್ರಾಗೌಡ ವ್ಯವಸ್ಥಾಪಕ ಕೆ. ಪವನ್ ಫೋಟೊ ತೆಗೆದು ಅದನ್ನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಮಾಲೀಕ ವಿನಯ್ ಹಾಗೂ ದರ್ಶನ್ ಆಪ್ತ‌, ಸಾಫ್ಟ್‌ವೇರ್ ಎಂಜಿನಿಯರ್ ಪ್ರದೂಷ್ ಅವರ ಐಫೋ‌ನ್‌ಗೆ ಕಳುಹಿಸಿದ್ದರು. ರೇಣುಕಸ್ವಾಮಿ ಮೃತಪಟ್ಟ ನಂತರ ಫೋಟೊ ಡಿಲೀಟ್ ಮಾಡಿ ಸಾಕ್ಷ್ಯ ನಾಶ ಪಡಿಸಿದ್ದರು. ದತ್ತಾಂಶ ಮರು ಸಂಗ್ರಹದ ವೇಳೆ ಆ ಫೋಟೊ ಲಭ್ಯವಾಗಿವೆ.

ಈ ಪ್ರಕರಣದಲ್ಲಿ ದರ್ಶನ್‌ ವಿರುದ್ಧ 3991 ಪುಟಗಳ ಚಾರ್ಜ್‌ ಶೀಟ್‌ ಹಾಗೂ  231 ಸಾಕ್ಷ್ಯಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago