Categories: Uncategorized

ವೈರಲ್‌ ಆಯ್ತು ಅಂಗಲಾಚಿ ರೇಣುಕಾಸ್ವಾಮಿ ಬೇಡಿಕೊಳ್ಳುತ್ತಿರುವ ಫೋಟೋ!

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿಗೆ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು ಅದರ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ.

ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು ಬೇಡಿಕೊಳ್ಳುತ್ತಿರುವ ಹಾಗೂ ನಿತ್ರಾಣಗೊಂಡು ಅಂಗಾತ ಮಲಗಿರುವ ಫೋಟೊಗಳು ಲಭ್ಯವಾಗಿವೆ.

ಈ ಪ್ರಕರಣದಲ್ಲಿ ನಟ ದರ್ಶನ್ ಅಲಿಯಾಸ್ ಡಿ ಬಾಸ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷ್ಯಗಳು ಸಿಕ್ಕಿದಂತೆ ಆಗಿದೆ.

ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೊ ಇದಾಗಿದೆ. ಮೈಮೇಲೆ ಗಾಯದ ಗುರುತುಗಳಿವೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಇನ್ನ ಮುಂದೆ ಪವಿತ್ರಾಗೆ ಸಂದೇಶ ಕಳುಹಿಸುವುದಿಲ್ಲ.‌ ತಪ್ಪಾಯಿತು ಬಿಡಿ ಎಂದು ಪರಿಪರಿಯಾಗಿ ಕ್ಷಮೆ ಕೋರಿದ್ದರೂ ಆರೋಪಿಗಳ ಮನಸ್ಸು ಕರಗಿರಲಿಲ್ಲ. ಮನಸೋಇಚ್ಛೆ ಹಲ್ಲೆ ನಡೆಸಿದ್ದರು ಎಂದು ಗೊತ್ತಾಗಿದೆ. ಈ ಅಂಶಗಳನ್ನೂ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಕೃತ್ಯದ ವೇಳೆ ಪವಿತ್ರಾಗೌಡ ವ್ಯವಸ್ಥಾಪಕ ಕೆ. ಪವನ್ ಫೋಟೊ ತೆಗೆದು ಅದನ್ನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಮಾಲೀಕ ವಿನಯ್ ಹಾಗೂ ದರ್ಶನ್ ಆಪ್ತ‌, ಸಾಫ್ಟ್‌ವೇರ್ ಎಂಜಿನಿಯರ್ ಪ್ರದೂಷ್ ಅವರ ಐಫೋ‌ನ್‌ಗೆ ಕಳುಹಿಸಿದ್ದರು. ರೇಣುಕಸ್ವಾಮಿ ಮೃತಪಟ್ಟ ನಂತರ ಫೋಟೊ ಡಿಲೀಟ್ ಮಾಡಿ ಸಾಕ್ಷ್ಯ ನಾಶ ಪಡಿಸಿದ್ದರು. ದತ್ತಾಂಶ ಮರು ಸಂಗ್ರಹದ ವೇಳೆ ಆ ಫೋಟೊ ಲಭ್ಯವಾಗಿವೆ.

ಈ ಪ್ರಕರಣದಲ್ಲಿ ದರ್ಶನ್‌ ವಿರುದ್ಧ 3991 ಪುಟಗಳ ಚಾರ್ಜ್‌ ಶೀಟ್‌ ಹಾಗೂ  231 ಸಾಕ್ಷ್ಯಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago