ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪದಲ್ಲಿ ಆಟೋ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಘಟನೆ ಇಂದು(ನ.29) ಸುಮಾರು ಬೆಳಿಗ್ಗೆ 9 ಗಂಟೆಗೆ ಸಂಭಿವಿಸಿದ್ದು, ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮಂಗಲ ಗ್ರಾಮದ ಹಿಮಾನ್ ರಾಜ್(11) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಇನ್ನು ಇದೇ ವೇಳೆ ಮತ್ತಿಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.
ಗಾಯಗೊಂಡ ಇಬ್ಬರು ಮಕ್ಕಳನ್ನು ಸಮೀಪದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ಮಾಡಿದ್ದು, ಅಪಘಾತ ಸಂಭವಿಸಿದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮಗೆರೆ ಗ್ರಾಮದ ಬಳಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ಅಪಘಾತ ನಡೆದ ಸ್ಥಳದಲ್ಲಿ ಅನೇಕ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ…
ಯಾವುದಾದರೂ ಕವನ ವಾಚಿಸಿ, ಏನಾದರೂ ಆಹಾರ ತಿನ್ನಿ ಎಂದವಳು ಹೇಳಿದಳು ಕವಿರಾಯರಿಗೆ ಕಿವಿಮಾತು! ಸಮ್ಮೇಳನದಿಂದ ಬರುವಾಗ ಆ..ಹಾರ, ಶಾಲು, ಸ್ಮರಣಿಕೆಗಳ…
ಡಿ.೧೨ರಂದು ಹೈಕೋರ್ಟ್ ನ್ಯಾಯಮೂರ್ತಿಗಳಾದ, ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ…
ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ನನ್ನು ಪೊಲೀಸ್ ವಶಕ್ಕೆ ಪಡೆಯುವಂತೆ ಮುಂಬೈ ನ್ಯಾಯಾಲಯ ಆದೇಶ ನೀಡಿತ್ತು. ಆದರೆ…
ನಾ.ದಿವಾಕರ ತಂತ್ರಜ್ಞಾನದ ಆವಿಷ್ಕಾರಗಳಿಗೆ ಸಮಾನಾಂತರವಾಗಿ ಬೆಳೆಯುತ್ತಿರುವ ಡಿಜಿಟಲ್ ವಂಚಕ ಜಾಲಗಳು ಕೋವಿಡ್ ೧೯ ವಿಶ್ವದಾದ್ಯಂತ ಜನರ ಬದುಕನ್ನು ಮೂರಾಬಟ್ಟೆ ಮಾಡಿದ…
ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವರು ಸಂವಿಧಾನ ಕುರಿತ ಚರ್ಚೆಯನ್ನು ಪ್ರಧಾನಿಯೇ ರಾಜಕೀಯಗೊಳಿಸುವ ಪ್ರಯತ್ನ ಮಾಡಿದ್ದು ಸರಿಯಲ್ಲ ದೇಶದ ಸಂವಿಧಾನ ೭೫…