Uncategorized

ಅದಾನಿ ಲಂಚ ಪ್ರಕರಣ ಚರ್ಚೆಗೆ ವಿಪಕ್ಷ ಪಟ್ಟು: ಲೋಕಸಭೆ ಸದನ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಲೋಕಸಭೆ ಸದನ ಕಲಾಪ ವೇಳೆ ಉದ್ಯಮಿ ಗೌತಮ ಅದಾನಿ ಲಂಚ ಪ್ರಕರಣವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದ್ದರಿಂದ ಉಭಯ ಸದನಗಳ ಕಲಾಪವನ್ನು ನಾಳೆಗೆ(ಡಿ.3) ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಇಂದು(ಡಿ.2) ಸದನ ಕಲಾಪ ನಡೆಯುತ್ತಿರುವ ವೇಳೆ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಗೌತಮ್‌ ಅದಾನಿ ಅವರ ಲಂಚ ಪ್ರಕರಣವನ್ನು ಚರ್ಚೆ ಮಾಡುವಂತೆ ಆಗ್ರಹಿಸಿದ್ದರು. ಹೀಗಾಗಿ ಉಭಯ ಸದನಗಳ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ.

ಲೋಕಸಭೆಯಲ್ಲಿ ಚಳಿಗಾಲದ ಅಧೀವೇಶ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೂ ಗೌತಮ್‌ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷ
ಸಂಸದರ ನಡುವೆ ಗಲಾಟೆ ಗದ್ದಲಗಳು ನಡೆಯುತ್ತಿದ್ದವು. ಈ ಕಾರಣ ದಿನದಿಂದ ದಿನಕ್ಕೆ ಲೋಕಸಭೆ ಅಧಿವೇಶನವನ್ನು ಮುಂದೂಡಲಾಗುತ್ತಿತ್ತು. ಅಂತೆಯೇ ಇಂದು ಸಹ ವಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿದ ಕಾರಣ ನಾಳೆ(ಡಿ.2) ಬೆಳಿಗ್ಗೆ 11 ಗಂಟೆಯವರೆಗೂ ಸದನ ಕಲಾಪವನ್ನು ಮುಂದೂಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

2 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

2 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

2 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

2 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

2 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

2 hours ago