ನವದೆಹಲಿ: ಲೋಕಸಭೆ ಸದನ ಕಲಾಪ ವೇಳೆ ಉದ್ಯಮಿ ಗೌತಮ ಅದಾನಿ ಲಂಚ ಪ್ರಕರಣವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದ್ದರಿಂದ ಉಭಯ ಸದನಗಳ ಕಲಾಪವನ್ನು ನಾಳೆಗೆ(ಡಿ.3) ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಇಂದು(ಡಿ.2) ಸದನ ಕಲಾಪ ನಡೆಯುತ್ತಿರುವ ವೇಳೆ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಗೌತಮ್ ಅದಾನಿ ಅವರ ಲಂಚ ಪ್ರಕರಣವನ್ನು ಚರ್ಚೆ ಮಾಡುವಂತೆ ಆಗ್ರಹಿಸಿದ್ದರು. ಹೀಗಾಗಿ ಉಭಯ ಸದನಗಳ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ.
ಲೋಕಸಭೆಯಲ್ಲಿ ಚಳಿಗಾಲದ ಅಧೀವೇಶ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೂ ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷ
ಸಂಸದರ ನಡುವೆ ಗಲಾಟೆ ಗದ್ದಲಗಳು ನಡೆಯುತ್ತಿದ್ದವು. ಈ ಕಾರಣ ದಿನದಿಂದ ದಿನಕ್ಕೆ ಲೋಕಸಭೆ ಅಧಿವೇಶನವನ್ನು ಮುಂದೂಡಲಾಗುತ್ತಿತ್ತು. ಅಂತೆಯೇ ಇಂದು ಸಹ ವಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿದ ಕಾರಣ ನಾಳೆ(ಡಿ.2) ಬೆಳಿಗ್ಗೆ 11 ಗಂಟೆಯವರೆಗೂ ಸದನ ಕಲಾಪವನ್ನು ಮುಂದೂಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…