ಮುಂಬೈ: ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಜನವರಿ.15ರಂದು ನಡೆಯಲಿದ್ದು, ಮಠದ ಆಡಳಿತ ಮಂಡಳಿಯೂ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರನ್ನು ಜಾತ್ರೆಗೆ ಅತಿಥಿಯಾಗಿ ಆಹ್ವಾನಿಸಿದೆ.
ಈ ಜಾತ್ರೆಯೂ ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಖ್ಯಾತಿ ಪಡೆದಿದ್ದು, ಪ್ರತಿವರ್ಷವೂ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಅದ್ದೂರಿಯಾಗಿ ನಡೆಯಲಿದೆ. ಈ ಜಾತ್ರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಈ ಮಧ್ಯೆ ಮಠದ ಆಡಳಿತ ಮಂಡಳಿಯೂ ಬಿಗ್ಬಿ ಅಮಿತಾಭ್ ಬಚ್ಚನ್ರನ್ನು ಭೇಟಿಯಾಗಿ ಜಾತ್ರೆಗೆ ಅತಿಥಿಯಾಗಿ ಭಾಗವಹಿಸಲು ಆಮಂತ್ರಣ ನೀಡಿದೆ.





