Categories: Uncategorized

ಭಾರೀ ಮಳೆಗೆ ತುಂಬಿ ಹರಿದ ಅಣೇಚನ್ನಾಪುರ ಕೆರೆ ಕೋಡಿ:ರಸ್ತೆ ದಾಟುವಾಗ ಬೈಕ್ ಸವಾರ ನೀರು ಪಾಲು

ನಾಗಮಂಗಲ: ತಾಲ್ಲೂಕಿನ ವಿವಿಧೆಡೆ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಬಿಂಡಿಗನವಿಲೆ ಹೋಬಳಿ ಅಣೇಚನ್ನಾಪುರ ಕೆರೆ ಕೋಡಿ ಬಿದ್ದು ನೀರು ರಸ್ತೆಯ ಮೇಲೆ ಹರಿದ ಪರಿಣಾಮ ರಸ್ತೆ ದಾಟುವಾಗ ಬೈಕ್ ಸವಾರ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಅಣೇಚನ್ನಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ರಾಮಚಂದ್ರೇಗೌಡ(೬೮) ಎಂಬ ವ್ಯಕ್ತಿಯೇ ಮೃತನಾಗಿದ್ದು, ಕಂಬದಹಳ್ಳಿಯಿಂದ ಬೆಳ್ಳೂರು ಕಡೆಗೆ ರಸ್ತೆ ದಾಟುವಾಗ ಈ ಅವಘಡ ಸಂಭವಿಸಿದೆ. ರಾತ್ರಿಯಿಡೀ ಬಿದ್ದ ಮಳೆಯಿಂದ ಅಣ್ಣೇಚನ್ನಾಪುರದ ಕೆರೆ ತುಂಬಿ ಕೋಡಿ ಹೊಡೆದಿದ್ದು, ರಸ್ತೆಯಲ್ಲಿ ನೀರು ಸಾಗಿದೆ. ನೀರಿನ ರಭಸ ಅರಿಯದ ರಾಮಚಂದ್ರೇಗೌಡ ತಮ್ಮ ಬೈಕ್‌ನೊಂದಿಗೆ ನೀರು ದಾಟಲು ಹೋಗಿದ್ದಾರೆ. ಈ ವೇಳೆ ಬೈಕ್ ಏಂಜಿನಿಗೆ ನೀರು ತಂಬಿದ ಕಾರಣ ಬೈಕ್ ನಿಂತಿದೆ. ಈ ವೇಳೆ ನೀರಿನ ರಭಸಕ್ಕೆ ರಾಮಚಂದ್ರೇಗೌಡ ಕೊಚ್ಚಿ ಹೋಗಿದ್ದಾನೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ನಂತರ ಬಿಂಡಿಗನವಿಲೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹಕ್ಕಾಗಿ ಕಾರ್ಯಾಚರಣೆ ನಡೆಸಿದರು. ನಂತರ ಸಂಜೆ ವೇಳೆಗೆ ರಾಮಚಂದ್ರೇಗೌಡರ ಮೃತ ದೇಹ ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪತ್ತೆ ಮಾಡಿ ನೀರಿನಿಂದ ಹೊರ ತೆಗೆದು ಶವವನ್ನು ತಾಲ್ಲೂಕಿನ ಬಿ.ಜಿ. ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ಮಾಡಿ ಶವವನ್ನು ವಾರಸುದಾರರಿಗೆ ನೀಡಲಾಯಿತು.

ಮೃತ ರಾಮಚಂದ್ರೇಗೌಡರಿಗೆ ಪತ್ನಿ ಸೇರಿದಂತೆ ಇಬ್ಬರು ಮಕ್ಕಳು ಇದ್ದಾರೆ. ಅಣೇಚನ್ನಾಪುರ ಕೆರೆ ಕೋಡಿ ಬಿದ್ದಾಗ ಇಂತಹ ಅವಘಡಗಳು ನಡೆಯುತ್ತಿದ್ದು, ರಸ್ತೆಗೆ ಅಡ್ಡಲಾಗಿ ಮೇಲು ಸೇತುವೆ ನಿರ್ಮಾಣ ಮಾಡುವಂತೆ ಲೋಕೋಪಯೋಗಿ ಇಲಾಖೆಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ. ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಗಳ ಕೋಡಿ: ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಮಾಚನಾಯಕನಹಳ್ಳಿ, ಅಣೇಚನ್ನಾಪುರ, ಬಿಂಡಿಗನವಿಲೆ, ದಾಸರಹಳ್ಳಿ ಹಾಗೂ ಸಾತೇನಹಳ್ಳಿ ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಕಳೆದ ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಬಹುತೇಕ ಕೆರೆ ಕಟ್ಟೆಗಳು ತುಂಬುತ್ತಿದ್ದು, ಕೆಲ ಕೆರೆಗಳು ಕೋಡಿ ಹೊಡೆದಿವೆ.

ಆಂದೋಲನ ಡೆಸ್ಕ್

Recent Posts

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

3 mins ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

2 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

2 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

3 hours ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

4 hours ago