ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವಿನ ಕೇಸ್ ಅನ್ನು ವಿಧಾನ ಪರಿಷತ್ ಎಥಿಕ್ಸ್ ಕಮಿಟಿಗೆ ರವಾನಿಸಲಾಗಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣ ಈಗಾಗಲೇ ಅಂತ್ಯವಾಗಿದೆ. ಈ ಬಗ್ಗೆ ನಾನು ಬೆಳಗಾವಿಯಲ್ಲೇ ರೂಲಿಂಗ್ ನೀಡಿದ್ದೆ. ಆದರೆ ಅವರಿಬ್ಬರೂ ಮತ್ತೊಮ್ಮೆ ದೂರು ನೀಡಿದ್ದಾರೆ. ಈ ಮಧ್ಯೆ ಇವರಿಬ್ಬರಿಗೂ ಸಂಧಾನ ಮಾಡಲು ಮುಂದಾಗಿದ್ದೆ, ಅವರು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ನೀಡಿದ್ದೇನೆ ಎಂದು ಹೇಳಿದರು.
ಈ ಕೇಸ್ನ ಕುರಿತು ಎಥಿಕ್ಸ್ ಕಮಿಟಿ ವರದಿ ನೀಡಲು ಒಂದು ತಿಂಗಳವರೆಗೂ ಕಾಲಾವಕಾಶ ನೀಡಿದ್ದೇನೆ. ಅದರ ವರದಿ ಬಂದ ಮೇಲೆ ಮುಂದಿನ ನಿರ್ಧಾರ ಮಾಡುತ್ತೇನೆ. ಆದರೆ ಈ ವಿಚಾರದ ಬಗ್ಗೆ ಸದನಲ್ಲಿ ಚರ್ಚೆ ಆಗುವುದಿಲ್ಲ. ಅಲ್ಲದೇ ಎಥಿಕ್ಸ್ ಕಮಿಟಿಯಲ್ಲಿ ಸಿ.ಟಿ ರವಿ ಇದ್ದರೂ, ಈಗ ಅವರದ್ದೇ ಕೇಸ್ ಬಂದಿರುವುದರಿಂದ ಅವರನ್ನು ಎಥಿಕ್ಸ್ ಕಮಿಟಿಯಿಂದ ಕೈ ಬಿಡಲಾಗಿದೆ ಎಂದರು.
ಇನ್ನು ಸದನದಲ್ಲಿ ಮುಗಿದದ್ದನ್ನ ಅಲ್ಲೇ ಮುಗಿಸಬೇಕಿತ್ತು. ಸದನ ನಡೆದಾಗ ನಡೆದಿದ್ದರೆ ಹೀಗೆ ಆಗ್ತಿರಲಿಲ್ಲ. ಸದನ ನಡೆಯದೇ ಇದ್ದಾಗ ಇದು ನಡೆದಿರೋದಕ್ಕೆ ಇಷ್ಟು ದೊಡ್ಡದು ಆಗಿದೆ. ಹಾಗಾಗಿ ಇದನ್ನು ಎಥಿಕ್ಸ್ ಕಮಿಟಿಗೆ ನೀಡಲಾಗಿದೆ. ಎಥಿಕ್ಸ್ ಕಮಿಟಿ ವರದಿ ನೀಡಲಿ ಮುಂದೆ ನೋಡೋಣ. ಎಥಿಕ್ಸ್ ಕಮಿಟಿಯಲ್ಲಿಯೇ 99% ಸಮಸ್ಯೆ ಪರಿಹಾರ ಆಗುವ ವಿಶ್ವಾಸ ಇದೆ. ಇಲ್ಲದೇ ಹೋದರೆ ಎಥಿಕ್ಸ್ ಕಮಿಟಿ ವರದಿಯನ್ನು ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…