Categories: Uncategorized

19 ರಿಂದ ‌ʼಅಂದದ ಶೌಚಾಲಯ ಆನಂದದ ಜೀವನʼ ಆಂದೋಲನ

ಮೈಸೂರು: ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಎಂಬ ವಿಶೇಷ ಆಂದೋದಲನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಿಕಾರಿಗಳಾದ ಕೆ.ಎಂ ಗಾಯಿತ್ರಿ ತಿಳಿಸಿದ್ದಾರೆ.

ವಿಶ್ವ ಶೌಚಾಲಯ ದಿನಾಚರಣೆ ಕುರಿತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದರು, ಗ್ರಾಮೀಣ ಸಮುದಾಯದಲ್ಲಿ ನೈರ್ಮಲ್ಯ, ಸುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನಾಚರಣೆಯು ಬಯಲು ಬಹಿರ್ದಸೆ ಮುಕ್ತ ಸ್ಥಿತಿಯ ಸ್ಥಾನಮಾನ ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ವಿಶ್ವ ಶೌಚಾಲಯ ಮತ್ತು ವಿಶ್ವಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಪ್ರಸ್ತುತ ವರ್ಷ “ನಮ್ಮ ಶೌಚಾಲಯ ನಮ್ಮ ಗೌರವ” ಎಂಬ ಶೀರ್ಷಿಕೆ ಹಾಗೂ ಅಂದದ ಶೌಚಾಲಯ ಆನಂದದ ಜೀವನ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಆಂದೋಲನ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 445062 ಕುಟುಂಬಗಳಿದ್ದು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಒಟ್ಟು 428713 ಹಾಗೂ ನಗೇಗಾ ಯೋಜನೆಯಡಿ ಮತ್ತು ಸ್ವಂತ ನಿರ್ಮಾಣದಲ್ಲಿ 5362 ಶೌಚಾಲಯಗಳು ನಿರ್ಮಾಣವಾಗಿರುತ್ತದೆ. ಇನ್ನು ಬಾಕಿ ಉಳಿದಿರುವ 19773 ಶೌಚಾಲಯಗಳಿಗೆ ಈಗಾಗಲೇ 16523 ಫಲಾಭವಿಗಳು ಶೌಚಾಲಯ ನಿರ್ಮಿಸಿಕೊಳ್ಳಲು ಸಿಟಿಜನ್ ಆಪ್ ಮೂಲಕ ಅರ್ಜಿ ಸಲ್ಲಿಸಿರುತ್ತಾರೆ. ಈ ಅಭಿಯಾನದಲ್ಲಿ ವಿಶೇಷವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶೌಚಾಲಯ ರಹಿತ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಹಾಗೂ ಈಗಾಗಲೇ ಇರುವ ಶೌಚಾಲಯಗಳನ್ನು ಉತ್ತಮವಾಗಿ ನಿರ್ವಹಣೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಶೌಚಾಲಯ ರಹಿತ ಅರ್ಹ ಫಲಾನುಭವಿಗಳು ಶೌಚಾಲಯಗಳನ್ನು ಪಡೆಯಲು https://sbm.gov.in ಈ ಲಿಂಕ್ ಬಳಸುವ ಮೂಲಕ ಸಾರ್ವಜನಿಕರೇ Citizen App ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂಬ ಮಾಹಿತಿಯನ್ನು ಆಂದೋಲನದ ಮೂಲಕ ವ್ಯಾಪಕವಾಗಿ ಪ್ರಚಾರ ಪಡಿಸಲು ತಿಳಿಸಿದರು.

ಸರ್ಕಾರದ ನಿರ್ದೇಶನದಂತೆ ವಿಶೇಷ ಆಂದೋಲನ ಅಂಗವಾಗಿ ಉತ್ತಮವಾಗಿ ನಿರ್ವಹಣೆ ಮಾಡುತ್ತಿರುವ ಸಮುದಾಯ ಶೌಚಾಲಯ ಅಂಗನವಾಡಿ, ಶಾಲಾ-ಕಾಲೇಜು ಶೌಚಾಲಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಶೌಚಾಲಯಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ನವೆಂಬರ್ 19 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ ನೀಡಲಾಗುವುದು ಎಂದು ಜಿ. ಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ. ಎಂ. ಕೃಷ್ಣರಾಜು ರವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿ.ಪ ಮುಖ್ಯ ಯೋಜನಾಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಹಾಗೂ WASH ಸಮಾಲೋಚಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…

9 hours ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…

9 hours ago

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…

9 hours ago

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…

10 hours ago

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

10 hours ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

10 hours ago