Categories: Uncategorized

19 ರಿಂದ ‌ʼಅಂದದ ಶೌಚಾಲಯ ಆನಂದದ ಜೀವನʼ ಆಂದೋಲನ

ಮೈಸೂರು: ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಎಂಬ ವಿಶೇಷ ಆಂದೋದಲನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಿಕಾರಿಗಳಾದ ಕೆ.ಎಂ ಗಾಯಿತ್ರಿ ತಿಳಿಸಿದ್ದಾರೆ.

ವಿಶ್ವ ಶೌಚಾಲಯ ದಿನಾಚರಣೆ ಕುರಿತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದರು, ಗ್ರಾಮೀಣ ಸಮುದಾಯದಲ್ಲಿ ನೈರ್ಮಲ್ಯ, ಸುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನಾಚರಣೆಯು ಬಯಲು ಬಹಿರ್ದಸೆ ಮುಕ್ತ ಸ್ಥಿತಿಯ ಸ್ಥಾನಮಾನ ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ವಿಶ್ವ ಶೌಚಾಲಯ ಮತ್ತು ವಿಶ್ವಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಪ್ರಸ್ತುತ ವರ್ಷ “ನಮ್ಮ ಶೌಚಾಲಯ ನಮ್ಮ ಗೌರವ” ಎಂಬ ಶೀರ್ಷಿಕೆ ಹಾಗೂ ಅಂದದ ಶೌಚಾಲಯ ಆನಂದದ ಜೀವನ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಆಂದೋಲನ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 445062 ಕುಟುಂಬಗಳಿದ್ದು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಒಟ್ಟು 428713 ಹಾಗೂ ನಗೇಗಾ ಯೋಜನೆಯಡಿ ಮತ್ತು ಸ್ವಂತ ನಿರ್ಮಾಣದಲ್ಲಿ 5362 ಶೌಚಾಲಯಗಳು ನಿರ್ಮಾಣವಾಗಿರುತ್ತದೆ. ಇನ್ನು ಬಾಕಿ ಉಳಿದಿರುವ 19773 ಶೌಚಾಲಯಗಳಿಗೆ ಈಗಾಗಲೇ 16523 ಫಲಾಭವಿಗಳು ಶೌಚಾಲಯ ನಿರ್ಮಿಸಿಕೊಳ್ಳಲು ಸಿಟಿಜನ್ ಆಪ್ ಮೂಲಕ ಅರ್ಜಿ ಸಲ್ಲಿಸಿರುತ್ತಾರೆ. ಈ ಅಭಿಯಾನದಲ್ಲಿ ವಿಶೇಷವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶೌಚಾಲಯ ರಹಿತ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಹಾಗೂ ಈಗಾಗಲೇ ಇರುವ ಶೌಚಾಲಯಗಳನ್ನು ಉತ್ತಮವಾಗಿ ನಿರ್ವಹಣೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಶೌಚಾಲಯ ರಹಿತ ಅರ್ಹ ಫಲಾನುಭವಿಗಳು ಶೌಚಾಲಯಗಳನ್ನು ಪಡೆಯಲು https://sbm.gov.in ಈ ಲಿಂಕ್ ಬಳಸುವ ಮೂಲಕ ಸಾರ್ವಜನಿಕರೇ Citizen App ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂಬ ಮಾಹಿತಿಯನ್ನು ಆಂದೋಲನದ ಮೂಲಕ ವ್ಯಾಪಕವಾಗಿ ಪ್ರಚಾರ ಪಡಿಸಲು ತಿಳಿಸಿದರು.

ಸರ್ಕಾರದ ನಿರ್ದೇಶನದಂತೆ ವಿಶೇಷ ಆಂದೋಲನ ಅಂಗವಾಗಿ ಉತ್ತಮವಾಗಿ ನಿರ್ವಹಣೆ ಮಾಡುತ್ತಿರುವ ಸಮುದಾಯ ಶೌಚಾಲಯ ಅಂಗನವಾಡಿ, ಶಾಲಾ-ಕಾಲೇಜು ಶೌಚಾಲಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಶೌಚಾಲಯಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ನವೆಂಬರ್ 19 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ ನೀಡಲಾಗುವುದು ಎಂದು ಜಿ. ಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ. ಎಂ. ಕೃಷ್ಣರಾಜು ರವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿ.ಪ ಮುಖ್ಯ ಯೋಜನಾಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಹಾಗೂ WASH ಸಮಾಲೋಚಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago