Categories: Uncategorized

19 ರಿಂದ ‌ʼಅಂದದ ಶೌಚಾಲಯ ಆನಂದದ ಜೀವನʼ ಆಂದೋಲನ

ಮೈಸೂರು: ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಎಂಬ ವಿಶೇಷ ಆಂದೋದಲನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಿಕಾರಿಗಳಾದ ಕೆ.ಎಂ ಗಾಯಿತ್ರಿ ತಿಳಿಸಿದ್ದಾರೆ.

ವಿಶ್ವ ಶೌಚಾಲಯ ದಿನಾಚರಣೆ ಕುರಿತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದರು, ಗ್ರಾಮೀಣ ಸಮುದಾಯದಲ್ಲಿ ನೈರ್ಮಲ್ಯ, ಸುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನಾಚರಣೆಯು ಬಯಲು ಬಹಿರ್ದಸೆ ಮುಕ್ತ ಸ್ಥಿತಿಯ ಸ್ಥಾನಮಾನ ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ವಿಶ್ವ ಶೌಚಾಲಯ ಮತ್ತು ವಿಶ್ವಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಪ್ರಸ್ತುತ ವರ್ಷ “ನಮ್ಮ ಶೌಚಾಲಯ ನಮ್ಮ ಗೌರವ” ಎಂಬ ಶೀರ್ಷಿಕೆ ಹಾಗೂ ಅಂದದ ಶೌಚಾಲಯ ಆನಂದದ ಜೀವನ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಆಂದೋಲನ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 445062 ಕುಟುಂಬಗಳಿದ್ದು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಒಟ್ಟು 428713 ಹಾಗೂ ನಗೇಗಾ ಯೋಜನೆಯಡಿ ಮತ್ತು ಸ್ವಂತ ನಿರ್ಮಾಣದಲ್ಲಿ 5362 ಶೌಚಾಲಯಗಳು ನಿರ್ಮಾಣವಾಗಿರುತ್ತದೆ. ಇನ್ನು ಬಾಕಿ ಉಳಿದಿರುವ 19773 ಶೌಚಾಲಯಗಳಿಗೆ ಈಗಾಗಲೇ 16523 ಫಲಾಭವಿಗಳು ಶೌಚಾಲಯ ನಿರ್ಮಿಸಿಕೊಳ್ಳಲು ಸಿಟಿಜನ್ ಆಪ್ ಮೂಲಕ ಅರ್ಜಿ ಸಲ್ಲಿಸಿರುತ್ತಾರೆ. ಈ ಅಭಿಯಾನದಲ್ಲಿ ವಿಶೇಷವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶೌಚಾಲಯ ರಹಿತ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಹಾಗೂ ಈಗಾಗಲೇ ಇರುವ ಶೌಚಾಲಯಗಳನ್ನು ಉತ್ತಮವಾಗಿ ನಿರ್ವಹಣೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಶೌಚಾಲಯ ರಹಿತ ಅರ್ಹ ಫಲಾನುಭವಿಗಳು ಶೌಚಾಲಯಗಳನ್ನು ಪಡೆಯಲು https://sbm.gov.in ಈ ಲಿಂಕ್ ಬಳಸುವ ಮೂಲಕ ಸಾರ್ವಜನಿಕರೇ Citizen App ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂಬ ಮಾಹಿತಿಯನ್ನು ಆಂದೋಲನದ ಮೂಲಕ ವ್ಯಾಪಕವಾಗಿ ಪ್ರಚಾರ ಪಡಿಸಲು ತಿಳಿಸಿದರು.

ಸರ್ಕಾರದ ನಿರ್ದೇಶನದಂತೆ ವಿಶೇಷ ಆಂದೋಲನ ಅಂಗವಾಗಿ ಉತ್ತಮವಾಗಿ ನಿರ್ವಹಣೆ ಮಾಡುತ್ತಿರುವ ಸಮುದಾಯ ಶೌಚಾಲಯ ಅಂಗನವಾಡಿ, ಶಾಲಾ-ಕಾಲೇಜು ಶೌಚಾಲಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಶೌಚಾಲಯಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ನವೆಂಬರ್ 19 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ ನೀಡಲಾಗುವುದು ಎಂದು ಜಿ. ಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ. ಎಂ. ಕೃಷ್ಣರಾಜು ರವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿ.ಪ ಮುಖ್ಯ ಯೋಜನಾಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಹಾಗೂ WASH ಸಮಾಲೋಚಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago