ಬೆಂಗಳೂರು: ಕುರುಡು ಕಾಂಚಾಣ ಕುಣಿಯುತ್ತಿದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ಅವರು ನಡೆಸುತ್ತಿರುವ ಅಂಧ ದರ್ಬಾರ್ ಸಾಕ್ಷಿಯಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ 59,500 ರೂಪಾಯಿ ಆಗಿದೆ. ಬೆಲೆ ಏರಿಕೆಯಿಂದ ಜನ ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದಾರೆ. ಆದರೆ ಜನಪ್ರತಿನಿಧಿಗಳು ಮಾತ್ರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಕಿಡಿಕಾರಿದೆ.
ಇನ್ನು ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿತ್ತು. ಸರ್ಕಾರದ ನಡೆಗೆ ಸಾರ್ವಜನಿಕರು ಸೇರಿದಂತೆ ಬಿಜೆಪಿ ನಾಯಕರು ಭಾರೀ ಆಕ್ರೋಶ ಹೊರಹಾಕಿದ್ದರು.
ಆದರೆ ಈಗ ಬೆಲೆ ಏರಿಕೆ ಮಾಡಿ ಉಪಮುಖ್ಯಮಂತ್ರಿ ಆದವರೇ ಈ ರೀತಿ ಶೋಕಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ದುಬಾರಿ ಲೈಫಿಗೆ ಬಿಜೆಪಿ ನಾಯಕರು ಕೆಂಡ ಕಾರಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…