Categories: Uncategorized

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಆರ್ಥಿಕ ಇಲಾಖೆ ಜೊತೆಗೆ ಚರ್ಚೆ ನಡೆಸಿದ್ದೇನೆ. ಯಾವ ರೀತಿ ಮಾಡಬೇಕೆಂದು ಹೇಳಿದ್ದೇನೆ. 2ರಿಂದ ಗಂಭೀರವಾಗಿ ಇಲಾಖಾವಾರು ಚರ್ಚೆ ನಡೆಸಲಿದ್ದೇನೆ ಎಂದರು.

ಪತ್ರ ವ್ಯವಹಾರ ನಡೆದಿಲ್ಲ ಎಂಬುದು ಸುಳ್ಳು : ಸಿಎಂ
ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ಗೆ ಕರ್ನಾಟಕದಿಂದ ಸ್ತಬ್ಧಚಿತ್ರ ಕಳುಹಿಸುವ ಬಗ್ಗೆ ಸರ್ಕಾರ ಪತ್ರವ್ಯವಹಾರ ಮಾಡಿದೆ. ಸಂಬಂಧಿಸಿದವರನ್ನು ಸಂಪರ್ಕ ಮಾಡಿದೆ. ಪತ್ರವ್ಯವಹಾರ ಮಾಡಿಲ್ಲ ಎಂಬುದು ಸುಳ್ಳ. ಪೆರೇಡ್‌ನಲ್ಲಿ ಪ್ರತಿ ರಾಜ್ಯದ ಸ್ತಬ್ದಚಿತ್ರಗಳು ಇರುವಂತೆ ಅವಕಾಶ ಮಾಡಿಕೊಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಪತ್ರವ್ಯವಹಾರ ಮಾಡದೆ ನಾವು ಸುಮ್ಮನಿರಲಿಲ್ಲ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಉತ್ತಮ ವಾತಾವರಣ
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣವಿದೆ. ದಾವೋಸ್‌ನಲ್ಲಿ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಅನೇಕ ಕಂಪನಿಗಳು ಬಂಡವಾಳ ಹೂಡಿಕೆಗೆ ಒಲವು ತೋರಿದ್ದಾರೆ. ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಉದ್ಯಮಿಗಳಿಗೆ ನಮ್ಮಲ್ಲಿರುವ ಅನುಕೂಲಗಳ ಬಗ್ಗೆ ಹೇಳಿದ್ದಾರೆ. ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿ ಉತ್ತಮ ವಾತಾವರಣ,ಅನುಕೂಲತೆ ಇದೆ ಎಂದರು. ಮಾನವ ಸಂಪನ್ಮೂಲ ಜಾಸ್ತಿ ಇದೆ. ಕೌಶಲ್ಯ ಹೊಂದಿದ ಮತ್ತು ಕೌಶಲರಹಿತ ಪದವೀಧರರು ಇದ್ದಾರೆ. ಸರ್ಕಾರದಿಂದಲೇ ಕೌಶಲತರಬೇತಿ ಕೊಡಿಸಿ ಉದ್ಯೋಗಕ್ಕೆ ತಯಾರು ಮಾಡುವುದರಿಂದ ಮಾನವ ಸಂಪನ್ಮೂಲದ ಕೊರತೆ ಇಲ್ಲ ಎಂದು ನುಡಿದರು.

ವರದಿ ಕೊಡಲಿ
ವಿಧಾನಮಂಡಲ ಜಂಟಿ ಅಧಿವೇಶದನಲ್ಲಿ ರಾಜ್ಯಸರ್ಕಾರ ಸಿದ್ಧಪಡಿಸಿಕೊಟ್ಟ ಭಾಷಣವನ್ನು ರಾಜ್ಯಪಾಲರು ಓದಬೇಕಾಗಿತ್ತು. 176ಎ ಮತ್ತು 163 ಸೆಲ್ ಪ್ರಕಾರ ಓದಬೇಕಿತ್ತು. ಆದರೆ,ರಾಜ್ಯಪಾಲರು ಓದಲಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದ ಸಿಎಂ, ರಾಷ್ಟ್ರಪತಿಗಳಿಗೆ ವರದಿ ಕೊಟ್ಟಿದ್ದಾರೆ. ಬೇಡಿ ಅನ್ನಲ್ಲ, ಕೊಡಲಿ. ಏನು ನಡೆದಿದೆ ಎಂದು ಹೇಳಿದ್ದಾರೆಯೇ ಹೊರತು ವರದಿಯಲ್ಲ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

34 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

38 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

43 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

55 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

60 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

1 hour ago