Categories: Uncategorized

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯ ಬಂಗಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐಟಿ ದಾಳಿ ಒತ್ತಡ?
ಇತ್ತೀಚಿಗೆ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್‌ಗೆ ಸಂಬಂಧಿಸಿದಂತೆ ಪದೇ ಪದೇ ದಾಳಿ ನಡೆಸುತ್ತಿದ್ದರು. ಇಂದು ಸಹ ದಾಳಿ ನಡೆಯುತ್ತಿದ್ದ ಸಮಯದಲ್ಲೇ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಪದೇ ಪದೇ ದಾಳಿಗಳು ಮತ್ತು ಸಂಬಂಧಿತ ತನಿಖೆಗಳಿಂದಾಗಿ ರಾಯ್ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ.

ಯಾರು ಈ ಸಿ.ಜೆ. ರಾಯ್?
ಡಾ. ರಾಯ್ ಸಿ.ಜೆ. (ಡಾ. ರಾಯ್ ಚಿರಿಯಾಂಕಂದತ್ ಜೋಸೆಫ್) ಅವರು ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕರಾಗಿದ್ದು, ದಕ್ಷಿಣ ಭಾರತದ ಅಗ್ರಗಣ್ಯ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಬ್ಬರಾಗಿ ಹೆಸರುವಾಸಿಯಾಗಿದ್ದರು. ಬೆಂಗಳೂರು, ಕೇರಳ, ಯುಎಇ ಸೇರಿದಂತೆ ವಿವಿಧೆಡೆ ವ್ಯಾಪಾರ ವಿಸ್ತರಣೆ ಮಾಡಿದ್ದ ಕಂಪನಿ ಜೀರೋ-ಡೆಬ್ಟ್ ಮಾಡೆಲ್‌ನೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. ಅವರು ಸ್ಲೊವಾಕ್ ರಿಪಬ್ಲಿಕ್‌ನ ಗೌರವ ಕಾನ್ಸುಲ್ ಆಗಿಯೂ ಸೇವೆ ಸಲ್ಲಿಸಿದ್ದರು. ರಿಯಲ್ ಎಸ್ಟೇಟ್‌ನ ಜೊತೆಗೆ ಫಿಲ್ಮ್ ಪ್ರೊಡಕ್ಷನ್, ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಸ್ಪಾನ್ಸರ್‌ಶಿಪ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು.

ಪೊಲೀಸ್ ತನಿಖೆ
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಪೋಸ್ಟ್‌ಮಾರ್ಟಂ ವರದಿ ಮತ್ತು ಇತರ ತಾಂತ್ರಿಕ ಪರಿಶೀಲನೆಗಳ ನಂತರ ಸ್ಪಷ್ಟ ಕಾರಣ ತಿಳಿಯಲಿದೆ. ಐಟಿ ದಾಳಿ ಸಂಬಂಧಿತ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago