Mysore
25
light rain

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

ಭಾರತ-ಪಾಕಿಸ್ತಾನ ಮಧ್ಯೆ ಕದನ ವಿರಾಮ ಜಾರಿ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಸ್ಪಷ್ಟನೆ

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಮಧ್ಯ ಪ್ರವೇಶಿಸಿರುವ ಅಮೇರಿಕಾ ಹಾಗೂ ಉಭಯ ರಾಷ್ಟ್ರಗಳು ಶಾಂತಗೊಳಿಸುವಲ್ಲಿ ಯಶಸ್ವಿಯಾಗಿದೆ.

ಅಮೇರಿಕಾ ಮಧ್ಯಸ್ಥಿಕೆಯಲ್ಲಿ ನಡೆದ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣವೇ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ.

ಸಂಪೂರ್ಣವಾಗಿ ಕದನ ವಿರಾಮ ಘೋಷಣೆಯಾಗಿದೆ ಎಂದು ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದ್ದು, ಮೇ.12ರಂದು ಭಾರತ-ಪಾಕ್‌ ಮಧ್ಯೆ ಮಾತುಕತೆ ನಡೆಸಲು ನಿರ್ಧಾರ ಮಾಡಲಾಗಿದೆ.

ಈ ಬಗ್ಗೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್‌ ಸ್ಪಷ್ಟನೆ ನೀಡಿದ್ದು, ಕದನ ವಿರಾಮಕ್ಕೆ ಪಾಕ್‌ ಅಂಗಲಾಚಿದ ಹಿನ್ನೆಲೆಯಲ್ಲಿ ಅಮೇರಿಕಾ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

 

 

 

 

Tags:
error: Content is protected !!