ದೇಶದಲ್ಲಿ ಕೆಜಿ ಈರುಳ್ಳಿ ಬೆಲೆ 70 ರೂಪಾಯಿಗಳನ್ನು ಮುಟ್ಟಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮುಂದಿನ ವರ್ಷದ ಮಾರ್ಚ್ ಅಂತ್ಯದವರೆಗೂ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಶುಕ್ರವಾರ 70 ರೂಪಾಯಿ ದಾಟಿದ ಹಿನ್ನೆಲೆಯಲ್ಲಿ ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಆರ್ಬಿಐ ಗೌರ್ನರ್ ಶಕ್ತಿಕಾಂತ್ ಅವರು ಡಿಸೆಂಬರ್ನಲ್ಲಿ ತರಕಾರಿ ಬೆಲೆಗಳು ಏರಿಕೆಯಾಗಬಹುದು, ನವೆಂಬರ್ ಹಾಗೂ ಡಿಸೆಂಬರ್ ಎರಡೂ ತಿಂಗಳಿನಲ್ಲಿಯೂ ಹಣದುಬ್ಬರ ಉಂಟಾಗಬಹುದು ಎಂದು ಎಚ್ಚರಿಸಿದ್ದ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಈ ಹಿಂದೆ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಕನಿಷ್ಠ ರಫ್ತು ಬೆಲೆಯನ್ನು ಪ್ರತಿ ಮೆಟ್ರಿಕ್ ಟನ್ಗೆ 800 ರೂಪಾಯಿಗಳಷ್ಟು ವಿಧಿಸಿತ್ತು. ಈ ದರ 31ಕ್ಕೆ ಕೊನೆಯಾಗಲಿದ್ದು, ಬಳಿಕ ಮಾರ್ಚ್ 31ರವರೆಗೆ ರಫ್ತು ನಿಷೇಧವಾಗಲಿದೆ.
ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ…
ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…
ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…