Uncategorized

ಜಾತಿ ಜನಗಣತಿ ಬಿಡುಗಡೆ ಮಾಡಿದ ದಿನವೇ ಕಾಂಗ್ರೆಸ್‌ ಇರಲ್ಲ: ಕೆ.ಎಸ್ ಈಶ್ವರಪ್ಪ

ಹಾವೇರಿ : ಜಾತಿಗಣತಿ ಬಗ್ಗೆ ಎಲ್ಲರಲ್ಲಿಯೂ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವಾಗಿದೆ. ಜಾತಿ ಗಣತಿ ಬಿಡುಗಡೆ ಮಾಡಿದರೆ, ಮಾಡಿದ ದಿನವೇ ಕಾಂಗ್ರೆಸ್‌ ಸರ್ಕಾರ ಇರಲ್ಲ ಎಂದು ಕೆ ಎಸ್‌ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಗೆಹರಿಯದ ಹಲವಾರು ಸಮಸ್ಯೆಗಳಿವೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಕರ್ನಾಟಕ ಸರ್ಕಾರ ಹೈ ಕಮಾಂಡ್‌ನ ಎಟಿಎಂ ಆಗಿದೆ ಆದರೆ, ಕ್ಷೇತ್ರದ ಅಭಿವೃದ್ಧಿಗೆ ಹಣ ಮಾತ್ರ ಕೊಡುತ್ತಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಡಿಕೆಶಿ ತನಿಖೆಯನ್ನು ಸಿಬಿಐ ಮುಂದುವರೆಸಲು ಯಾವುದೇ ಅಭ್ಯಂತರ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ. ಡಿಕೆ ಶಿವಕುಮಾರ್‌ ಅವರು ಲೋಕಸಭಾ ಚುನವಾಣೆ ಮೊದಲು ಅಥವಾ ನಂತರ ಜೈಲಿಗೆ ಹೋಗುತ್ತಾರೆ. ಆದರೆ ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನವಾಗಬೇಕಿದೆ. ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗವಾಗಿದೆ. ಈ ಅಕ್ರಮದಲ್ಲಿ ಹಣ ಸಿಕ್ಕಿರುವ ಬಗ್ಗೆ ರಾಜ್ಯದ ಜನರೇ ನೋಡಿದ್ದಾರೆ. ಡಿಸಿಎಂ ಜೈಲಿಗೆ ಹೋಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ನುಡಿದರು.

ಹಿಂದಿನ ಬಿಜೆಪಿ ಸರ್ಕಾರ ಸಾಲ ಮಾಡಿದೆ ಅಂತ ಗೊತ್ತಿದ್ದರೂ ಬಡ ಜನರಿಗೆ ಮೋಸ ಮಾಡಲೆಂದೇ ಗ್ಯಾರಂಟಿಗಳನ್ನು ಯಾಕೆ ಘೋಷಣೆ ಮಾಡಿದ್ದೀರಾ ಎಂದು ಎಂದು ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನಿಸಿದರು.

andolanait

Recent Posts

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ : ಓರ್ವ ಬಂಧನ

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…

26 mins ago

ಯುವ ರೈತರ ಮದುವೆಯಾಗುವ ಯುವತಿಯರಿಗೆ 5 ಲಕ್ಷ ನೀಡಲಿ ; ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗೆ ಮನವಿ

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…

40 mins ago

ಕಾಲುಜಾರಿ ನೀರಿನಲ್ಲಿ ಮುಳುಗಿ ಯುವಕ ಸಾವು

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…

49 mins ago

ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್

ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…

54 mins ago

ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…

1 hour ago

ಭಾಷೆ ಬೇರೆಯಾದರೂ, ದೇಶವೊಂದೇ ಭಾರತ

ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…

1 hour ago