ಹಾವೇರಿ : ಜಾತಿಗಣತಿ ಬಗ್ಗೆ ಎಲ್ಲರಲ್ಲಿಯೂ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಾಗಿದೆ. ಜಾತಿ ಗಣತಿ ಬಿಡುಗಡೆ ಮಾಡಿದರೆ, ಮಾಡಿದ ದಿನವೇ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಕೆ ಎಸ್ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಗೆಹರಿಯದ ಹಲವಾರು ಸಮಸ್ಯೆಗಳಿವೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಕರ್ನಾಟಕ ಸರ್ಕಾರ ಹೈ ಕಮಾಂಡ್ನ ಎಟಿಎಂ ಆಗಿದೆ ಆದರೆ, ಕ್ಷೇತ್ರದ ಅಭಿವೃದ್ಧಿಗೆ ಹಣ ಮಾತ್ರ ಕೊಡುತ್ತಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಡಿಕೆಶಿ ತನಿಖೆಯನ್ನು ಸಿಬಿಐ ಮುಂದುವರೆಸಲು ಯಾವುದೇ ಅಭ್ಯಂತರ ಇಲ್ಲ ಎಂದು ಹೈಕೋರ್ಟ್ ಹೇಳಿದೆ. ಡಿಕೆ ಶಿವಕುಮಾರ್ ಅವರು ಲೋಕಸಭಾ ಚುನವಾಣೆ ಮೊದಲು ಅಥವಾ ನಂತರ ಜೈಲಿಗೆ ಹೋಗುತ್ತಾರೆ. ಆದರೆ ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನವಾಗಬೇಕಿದೆ. ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗವಾಗಿದೆ. ಈ ಅಕ್ರಮದಲ್ಲಿ ಹಣ ಸಿಕ್ಕಿರುವ ಬಗ್ಗೆ ರಾಜ್ಯದ ಜನರೇ ನೋಡಿದ್ದಾರೆ. ಡಿಸಿಎಂ ಜೈಲಿಗೆ ಹೋಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ನುಡಿದರು.
ಹಿಂದಿನ ಬಿಜೆಪಿ ಸರ್ಕಾರ ಸಾಲ ಮಾಡಿದೆ ಅಂತ ಗೊತ್ತಿದ್ದರೂ ಬಡ ಜನರಿಗೆ ಮೋಸ ಮಾಡಲೆಂದೇ ಗ್ಯಾರಂಟಿಗಳನ್ನು ಯಾಕೆ ಘೋಷಣೆ ಮಾಡಿದ್ದೀರಾ ಎಂದು ಎಂದು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…