Uncategorized

ಜಾತಿ ಜನಗಣತಿ ಬಿಡುಗಡೆ ಮಾಡಿದ ದಿನವೇ ಕಾಂಗ್ರೆಸ್‌ ಇರಲ್ಲ: ಕೆ.ಎಸ್ ಈಶ್ವರಪ್ಪ

ಹಾವೇರಿ : ಜಾತಿಗಣತಿ ಬಗ್ಗೆ ಎಲ್ಲರಲ್ಲಿಯೂ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವಾಗಿದೆ. ಜಾತಿ ಗಣತಿ ಬಿಡುಗಡೆ ಮಾಡಿದರೆ, ಮಾಡಿದ ದಿನವೇ ಕಾಂಗ್ರೆಸ್‌ ಸರ್ಕಾರ ಇರಲ್ಲ ಎಂದು ಕೆ ಎಸ್‌ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಗೆಹರಿಯದ ಹಲವಾರು ಸಮಸ್ಯೆಗಳಿವೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಕರ್ನಾಟಕ ಸರ್ಕಾರ ಹೈ ಕಮಾಂಡ್‌ನ ಎಟಿಎಂ ಆಗಿದೆ ಆದರೆ, ಕ್ಷೇತ್ರದ ಅಭಿವೃದ್ಧಿಗೆ ಹಣ ಮಾತ್ರ ಕೊಡುತ್ತಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಡಿಕೆಶಿ ತನಿಖೆಯನ್ನು ಸಿಬಿಐ ಮುಂದುವರೆಸಲು ಯಾವುದೇ ಅಭ್ಯಂತರ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ. ಡಿಕೆ ಶಿವಕುಮಾರ್‌ ಅವರು ಲೋಕಸಭಾ ಚುನವಾಣೆ ಮೊದಲು ಅಥವಾ ನಂತರ ಜೈಲಿಗೆ ಹೋಗುತ್ತಾರೆ. ಆದರೆ ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನವಾಗಬೇಕಿದೆ. ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗವಾಗಿದೆ. ಈ ಅಕ್ರಮದಲ್ಲಿ ಹಣ ಸಿಕ್ಕಿರುವ ಬಗ್ಗೆ ರಾಜ್ಯದ ಜನರೇ ನೋಡಿದ್ದಾರೆ. ಡಿಸಿಎಂ ಜೈಲಿಗೆ ಹೋಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ನುಡಿದರು.

ಹಿಂದಿನ ಬಿಜೆಪಿ ಸರ್ಕಾರ ಸಾಲ ಮಾಡಿದೆ ಅಂತ ಗೊತ್ತಿದ್ದರೂ ಬಡ ಜನರಿಗೆ ಮೋಸ ಮಾಡಲೆಂದೇ ಗ್ಯಾರಂಟಿಗಳನ್ನು ಯಾಕೆ ಘೋಷಣೆ ಮಾಡಿದ್ದೀರಾ ಎಂದು ಎಂದು ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನಿಸಿದರು.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

59 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago