ಹಾವೇರಿ : ಜಾತಿಗಣತಿ ಬಗ್ಗೆ ಎಲ್ಲರಲ್ಲಿಯೂ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಾಗಿದೆ. ಜಾತಿ ಗಣತಿ ಬಿಡುಗಡೆ ಮಾಡಿದರೆ, ಮಾಡಿದ ದಿನವೇ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಕೆ ಎಸ್ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಗೆಹರಿಯದ ಹಲವಾರು ಸಮಸ್ಯೆಗಳಿವೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಕರ್ನಾಟಕ ಸರ್ಕಾರ ಹೈ ಕಮಾಂಡ್ನ ಎಟಿಎಂ ಆಗಿದೆ ಆದರೆ, ಕ್ಷೇತ್ರದ ಅಭಿವೃದ್ಧಿಗೆ ಹಣ ಮಾತ್ರ ಕೊಡುತ್ತಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಡಿಕೆಶಿ ತನಿಖೆಯನ್ನು ಸಿಬಿಐ ಮುಂದುವರೆಸಲು ಯಾವುದೇ ಅಭ್ಯಂತರ ಇಲ್ಲ ಎಂದು ಹೈಕೋರ್ಟ್ ಹೇಳಿದೆ. ಡಿಕೆ ಶಿವಕುಮಾರ್ ಅವರು ಲೋಕಸಭಾ ಚುನವಾಣೆ ಮೊದಲು ಅಥವಾ ನಂತರ ಜೈಲಿಗೆ ಹೋಗುತ್ತಾರೆ. ಆದರೆ ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನವಾಗಬೇಕಿದೆ. ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗವಾಗಿದೆ. ಈ ಅಕ್ರಮದಲ್ಲಿ ಹಣ ಸಿಕ್ಕಿರುವ ಬಗ್ಗೆ ರಾಜ್ಯದ ಜನರೇ ನೋಡಿದ್ದಾರೆ. ಡಿಸಿಎಂ ಜೈಲಿಗೆ ಹೋಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ನುಡಿದರು.
ಹಿಂದಿನ ಬಿಜೆಪಿ ಸರ್ಕಾರ ಸಾಲ ಮಾಡಿದೆ ಅಂತ ಗೊತ್ತಿದ್ದರೂ ಬಡ ಜನರಿಗೆ ಮೋಸ ಮಾಡಲೆಂದೇ ಗ್ಯಾರಂಟಿಗಳನ್ನು ಯಾಕೆ ಘೋಷಣೆ ಮಾಡಿದ್ದೀರಾ ಎಂದು ಎಂದು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…