ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಶೇ.60ರಷ್ಟು ಕಮಿಷನ್ ಎಂದು ಆರೋಪಿಸಿದ್ದು, ಇದೀಗ ಎಚ್ಡಿಕೆ ಅವರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.7) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಒಳ್ಳೆಯ ಸಚಿವ ಸ್ಥಾನ ಸಿಕ್ಕಿದೆ. ಅವರು ಈಗ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತಿಸಬೇಕು. ಚುನಾವಣೆ ವೇಳೆ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುವುದು ಸಹಜ. ಆದರೆ ರಾಜ್ಯದಲ್ಲಿ ಚುನಾವಣೆ ಇನ್ನೂ ದೂರ ಇದೆ. ಹೀಗಾಗಿ ಶೇ.60ರಷ್ಟು ಕಮಿಷನ್ ಆರೋಪವನ್ನು ಬಿಟ್ಟು ಅಭಿವೃದ್ದಿ ಕಾರ್ಯಗಳ ಬಗ್ಗೆ ಚಿಂತನೆ ನಡೆಸಲಿ ಎಂದು ವಾಗ್ದಾಳಿ ಮಾಡಿದ್ದಾರೆ.
ಕೇಂದ್ರ ಸಚಿವ ಎಚ್ಡಿಕೆ ಅವರು ಮೊದಲು ಕರ್ನಾಟಕ ರಾಜ್ಯಕ್ಕೆ ಏನು ಅಭಿವೃದ್ಧಿ ಮಾಡಬೇಕೆಂಬ ಕುರಿತಂತೆ ಚರ್ಚಿಸಬೇಕು. ಆದರೆ ಅವರು ಅದನ್ನು ಬಿಟ್ಟು ಶನಿವಾರ ಮತ್ತು ಭಾನುವಾರ ಬಂತೆಂದರೆ ರಾಜ್ಯಕ್ಕೆ ಬಂದು ರಾಜ್ಯ ಸರ್ಕಾರದ ವಿರುದ್ಧ ಇಂತಹ ಆರೋಪ ಮಾಡುತ್ತಾರೆ ಎಂದು ಟೀಕಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…