Categories: Uncategorized

ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ: ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಈ ಸೂಚನೆ ನೀಡಿದರು.

ರಾಜ್ಯದ ನರ್ಸಿಂಗ್‌ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ “ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು” ರಚಿಸಲಾಗುವುದು.

ನರ್ಸಿಂಗ್‌ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್‌ ಸರ್ಟಿಫಿಕೇಟ್‌ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್‌ ನ್ನ ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌ ಸೂಚನೆ ನೀಡಿದರು .

ಪ್ರಸ್ತುತ ಸರಕಾರಿ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 10,000. ಮ್ಯಾನೇಜ್‌ ಮೆಂಟ್‌ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 1 ಲಕ್ಷ ಮತ್ತು ನಾನ್‌-ಕರ್ನಾಟಕ ವಿದ್ಯಾರ್ಥಿಗಳಿಗೆ 1.40 ಲಕ್ಷ ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 611 ನರ್ಸಿಂಗ್‌ ಕಾಲೇಜುಗಳಿದ್ದು 35,000 ಸೀಟ್‌ ಗಳು ಲಭ್ಯವಿವೆ. ಅಲ್ಲದೇ, ಈ ಶುಲ್ಕವನ್ನು ಶೇಕಡಾ 20 ರಷ್ಟು ಹೆಚ್ಚಿಸುವಂತೆ ನರ್ಸಿಂಗ್‌ ಕಾಲೇಜುಗಳ ಆಡಳಿತ ಮಂಡಳಿಯ ಪ್ರತಿನೀಧಿಗಳು ಇತ್ತೀಚೆಗೆ ಮಾಡಿದ ಮನವಿಯನ್ನು ಸಚಿವ ಶರಣ ಪ್ರಕಾಶ್‌ ಪಾಟೀಲ್‌ ತಿರಸ್ಕರಿಸಿದ್ದಾರೆ.

ಈ ಸಮಿತಿಯು ಬಿಎಸ್ಸಿ, ನರ್ಸಿಂಗ್‌ ಹಾಗೂ ಜನರಲ್‌ ನರ್ಸಿಂಗ್‌ ಮತ್ತು ಮಿಡ್‌ವೈಪ್ರೀ (ಜಿಎನ್‌ಎಂ) ಡಿಪ್ಲಮೋ ಪ್ರೋಗ್ರಾಂ ಗಳ ಶುಲ್ಕದ ಬಗ್ಗೆಯೂ ನಿಗಾವಹಿಸಲಿದೆ.

ಹಾಗೆಯೇ, ಜಿಲ್ಲಾಧಿಕಾರಿಗಳ ಸಭೆಯನ್ನು ಆಯೋಜಿಸಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಜಿಎನ್‌ಎಂ ನರ್ಸಿಂಗ್‌ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ತಿಂಗಳ ಒಳಗಾಗಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲು ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಗಳಾದ ಮೊಹಮ್ಮದ್‌ ಮೋಶಿನ್‌ ಅವರಿಗೆ ಸೂಚನೆ ನೀಡಿದರು.

ಬಿಎಸ್‌ಸಿ ನರ್ಸಿಂಗ್‌ ಕಾಲೇಜುಗಳಿಗೆ ಸಂಬಂಧಿಸಿದಂತೆ ಒಂದು ಪರಿಶೀಲನಾ ತಂಡವನ್ನು ರಚಿಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಡಾ. ಬಿ.ಎಲ್‌ ಸುಜಾತಾ ಅವರಿಗೆ ಸೂಚನೆ ನೀಡಿದರು.

ನರ್ಸಿಂಗ್‌ ಕಾಲೇಜುಗಳಲ್ಲಿ ಅಗತ್ಯ ಸೌಲಭ್ಯಗಳು, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ಲ್ಯಾಬೋರೋಟರಿಗಳು, ಗ್ರಂಥಾಲಯಗಳು ಹಾಗೂ ಹೈಜೀನ್‌ ಸ್ಟಾಂರ್ಡ್‌ಡ್‌ ಇಲ್ಲದೇ ಇರುವ ಬಗ್ಗೆ ಹಲವು ದೂರುಗಳು ನಮ್ಮ ಕಚೇರಿಗೆ ಸಲ್ಲಿಕೆಯಾಗಿವೆ. ಹೆಚ್ಚು ಶುಲ್ಕವನ್ನು ತಗೆದುಕೊಳ್ಳುವುದರ ಹೊರತಾಗಿಯೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸಂಸ್ಥೆಗಳು ವಿಫಲವಾಗಿವೆ. ಅಗತ್ಯ ಸೌಲಭ್ಯಗಳನ್ನು ಹೊಂದಿರದೇ ಇರುವ ನರ್ಸಿಂಗ್‌ ಕಾಲೇಜುಗಳ ಅನುಮತಿಯನ್ನ ಹಿಂದಕ್ಕೆ ಪಡೆಯಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಒಂದು ಕಟ್ಟಡ ಒಂದು ಸಂಸ್ಥೆ ನಿಯಮ
ನರ್ಸಿಂಗ್‌ ಕಾಲೇಜುಗಳನ್ನು ನಡೆಸಲು ಅನುಮತಿ ಪಡೆದಿರುವ ಕಟ್ಟಡಗಳಲ್ಲಿ ನರ್ಸಿಂಗ್‌ ಕೋರ್ಸುಗಳನ್ನು ಮಾತ್ರ ನಡೆಸಬೇಕು. ಬೇರೆ ಯಾವುದೇ ಕೋರ್ಸುಗಳನ್ನು ನಡೆಸುತ್ತಿದ್ದರೆ ಅಂತಹ ಕಾಲೇಜುಗಳ ಅನುಮತಿಯನ್ನು ಹಿಂಪಡೆಯಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ರಾಜೀವ್‌ ಗಾಂಧಿ ಯೂನಿರ್ಸಿಟಿ ಆಫ್‌ ಹೆಲ್ತ ಸೈನ್ಸ್‌ಸ್‌ ನ ಉಪ-ಕುಲಪತಿಗಳಾದ ಡಾ ರಮೇಶ್‌, ರಿಜಿಸ್ಟ್ರಾರ್‌ ಪಿ.ಆರ್‌ ಶಿವಪ್ರಸಾದ್‌, ಜಂಟಿ ಕಾರ್ಯದರ್ಶಿಗಳಾದ ವೆಂಕಟೇಶ್‌ ಮೂರ್ತಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago