Categories: Uncategorized

ಟೀಕೆ ಬಿಟ್ಟು ಸಲಹೆ ಕೊಡಲಿ: ʼಪೈʼಗೆ ಟಾಂಗ್‌ ಕೊಟ್ಟ ಎಂಬಿ ಪಾಟೀಲ್‌

ಬೆಂಗಳೂರು: ನಗರ ವ್ಯವಸ್ಥೆ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ಸುಧಾರಣೆಗೆ ಸಲಹೆ ಕೊಡಲಿ ಎಂದು ಉದ್ಯಮಿ ಮೋಹನ್‌ದಾಸ್‌ ವಿರುದ್ಧ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಕುಟುಕಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಹೀಗೆ ಹೇಳಿಕೆ ನೀಡುತ್ತಿರುವ ಉದ್ಯಮಿ ಪೈ ಅವರ ಮನಸ್ಸಿನಲ್ಲಿ ಏನಿದೆಯೋ ಎಂಬುದು ತಿಳಿದಿಲ್ಲ. ಪೈ ಕೂಡ ಈ ನಗರದಿಂದಲೇ ಲಾಭ ಮಾಡಿಕೊಂಡವರು. ಈಗ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗುವುದಿಲ್ಲ ಎಂದು ಪೈ ವಿರುದ್ಧ ಹರಿಹಾಯ್ದಿದ್ದಾರೆ.

ಮೋದಿ ಸರ್ಕಾರ ಏನೇ ಮಾಡಿದರೂ ಸರಿ, ಸಿದ್ದರಾಮಯ್ಯ ಸರ್ಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವ ಮನಸ್ಥಿತಿಯಲ್ಲಿ ಈ ರೀತಿಯ ಹೇಳಿಕೆ ನೀಡುತ್ತಾರೆ. ಇಂತಹ ಹೇಳಿಕೆಗಳಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದು ಚಾಟಿ ಬೀಸಿದರು.

ಕರ್ನಾಟಕದ ಸಮಗ್ರ ಅಭಿವೃದ್ದಿ ನಮ್ಮ ಆದ್ಯತೆಯಾಗಿದೆ. ಯಾರೇ ಆಗಲಿ ಈ ವಿಚಾರವಾಗಿ ಸಲಹೆ ಕೊಡಬಹುದು. ಪೈ ಅವರು ನನ್ನನ್ನಾಗಲಿ, ಸಿಎಂ, ಡಿಸಿಎಂ ಅಥವಾ ಐಟಿ ಸಚಿವರನ್ನಾದರೂ ಕಾಣಬಹುದು ಎಂದರು.

ಈ ಹಿಂದೆ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ, ಆಗ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಟಾಂಗ್‌ ಕೊಟ್ಟರು.

ತೆಲಂಗಾಣಕ್ಕೆ ನೀರು ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕುಡಿಯುವ ಉದ್ದೇಶಕ್ಕಾಗಿ ಆಲಮಟ್ಟಿ ಅಣೆಕಟ್ಟೆಯಿಂದ ತೆಲಂಗಾಣಕ್ಕೆ 1.24 ಟಿಎಂಸಿ ಅಡಿ ನೀರು ಬಿಟ್ಟಿದೆ. ಕೆಲವೊಂದು ವಿಚಾರಗಳನ್ನು ಮಾನವೀಯವಾಗಿ ನೋಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago