Categories: Uncategorized

ಕದನ ವೀರ ಚಲನಚಿತ್ರಕ್ಕೆ ಶುಭ ಹಾರೈಸಿದ ರಾಜ್ಯಪಾಲ ವಿಜಯಶಂಕರ್‌, ಯದುವೀರ್

ಮೈಸೂರು: ಮೇಘಾಲಯ ರಾಜ್ಯಪಾಲರಾದ ಸಿ ಹೆಚ್ ವಿಜಯಶಂಕರ್ ಹಾಗೂ ಸಂಸದ ಯದುವೀರ್ ರ್ಯೋಧರ ತ್ಯಾಗ, ಬಲಿದಾನ ಹಾಗೂ ಶೌರ್ಯದ ಕುರಿತು ನಿರ್ಮಾಣವಾಗಿರುವ ಕದನ ವೀರ ಚಲನ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ
ಶುಭ ಹಾರೈಸಿದರು.

ಕದನ ವೀರ ಚಲನ ಚಿತ್ರ ಇದೆ 1ನೇ ಸೆಪ್ಟೆಂಬರ್ (ಭಾನುವಾರ) ಕರ್ನಾಟಕ ಕಲಾ ಮಂದಿರ ನಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ 5 ಪ್ರದರ್ಶನ ಇರಲಿದೆ.  ಜೊತೆಗೆ ಚಿತ್ರದ ಟ್ರೇಲರ್ ನ್ನೂ YouTube channel Sainik Academy Mysuru ನಲ್ಲಿ ವೀಕ್ಷಿಸಬಹುದು, ಪೂರ್ತಿ ಚಲನ ಚಿತ್ರವನ್ನು ಇನ್ನೇನು ಕೆಲವೇ ದಿನಗಳಲ್ಲಿ ಮೇಲ್ಕಂಡ YouTube ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗುವುದು.

ಯೋಧರ ತ್ಯಾಗ, ಬಲಿದಾನ, ಶೌರ್ಯದ ಬಗ್ಗೆ ನಿರ್ಮಾಣ ಆಗಿರುವ ಕದನ ವೀರ ಚಲನ ಚಿತ್ರವನ್ನು  ಸೈನಿಕ ಅಕಾಡೆಮಿ (ರಿ) ಮೈಸೂರು ವತಿಯಿಂದ ನಿರ್ಮಾಣ ಮಾಡಲಾಗಿದೆ.  ಒಂದು ವರ್ಷಗಳ ಸತತ ಪ್ರಯತ್ನ ಪರಿಶ್ರಮದಿಂದ SAM ಸಂಸ್ಥಾಪಕರು ಮತ್ತು ಎಕ್ಸ್ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಶ್ರೀಧರ ಸಿ ಎಂ ರವರ ಪ್ರೋತ್ಸಾಹದಿಂದ, ಸೈನಿಕರ ಮೇಲೆ ಅಪಾರ ಅಭಿಮಾನ ಇರುವ SAM ನ ಅಭ್ಯರ್ಥಿ ಜೀವನ ಚಿಕ್ಕಬಂಡಾರ ಅವರ ನಿರ್ದೇಶನ ಹಾಗೂ ನಿರ್ಮಾಪಕ ಅನಿತಾ ಶ್ರೀಧರ ಅವರ ಸಹಕಾರದಿಂದ ಈ ಚಿತ್ರ ಮೂಡಿಬಂದಿದೆ.

ನನ್ನ ಮಣ್ಣು, ನನ್ನ ಜಲ, ನನ್ನ ಗಾಳಿ, ನನ್ನ ಜನ, ದೇಶ ಎಂಬ ಕಿಚ್ಚು ಯುವಪೀಳಿಗೆಗೆ, ಪೋಷಕರಿಗೆ ಹೆಚ್ಚಿಸಬೇಕೆಂಬ ಸೈನಿಕರ ತ್ಯಾಗ ಬಲಿದಾನ ಪ್ರತಿಯೊಬ್ಬರೂ ತಿಳಿಯಬೇಕು, ಸೈನಿಕರ ಸಾಹಸ ಸಾಧನೆಯು ಶಾಲೆಯ ಪಠ್ಯ ಪುಸ್ತಕಗಳಲ್ಲಿ ಪ್ರಕಟಿಸಬೇಕು, ತನಗಾಗಿ ಅಲ್ಲ, ತನ್ನವರಿಗಾಗಿ ಸೇವೆ ಮಾಡುತ್ತಿರುವ ಸೈನಿಕನಿಗೆ ಅಪಾರ ಗೌರವ ಸಿಗಬೇಕು, ಸೈನಿಕರಿಗೆ ಉತ್ಸಾಹ ಧೈರ್ಯ ಹೆಚ್ಚಿಸುವ ಕೆಲಸ ನಾವುಗಳು ಮಾಡಬೇಕೆಂಬ ಉದ್ದೇಶದಿಂದ ಈ ಚಲನ ಚಿತ್ರವನ್ನು SAM ಭವಿಷ್ಯದ ಸೈನಿಕರಿಂದಲೇ ನಿರ್ಮಿಸಲಾಗಿದೆ ಎಂದು ಚಿತ್ರತಂಡ ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

4 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

5 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

6 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago