Categories: Uncategorized

ಕದನ ವೀರ ಚಲನಚಿತ್ರಕ್ಕೆ ಶುಭ ಹಾರೈಸಿದ ರಾಜ್ಯಪಾಲ ವಿಜಯಶಂಕರ್‌, ಯದುವೀರ್

ಮೈಸೂರು: ಮೇಘಾಲಯ ರಾಜ್ಯಪಾಲರಾದ ಸಿ ಹೆಚ್ ವಿಜಯಶಂಕರ್ ಹಾಗೂ ಸಂಸದ ಯದುವೀರ್ ರ್ಯೋಧರ ತ್ಯಾಗ, ಬಲಿದಾನ ಹಾಗೂ ಶೌರ್ಯದ ಕುರಿತು ನಿರ್ಮಾಣವಾಗಿರುವ ಕದನ ವೀರ ಚಲನ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ
ಶುಭ ಹಾರೈಸಿದರು.

ಕದನ ವೀರ ಚಲನ ಚಿತ್ರ ಇದೆ 1ನೇ ಸೆಪ್ಟೆಂಬರ್ (ಭಾನುವಾರ) ಕರ್ನಾಟಕ ಕಲಾ ಮಂದಿರ ನಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ 5 ಪ್ರದರ್ಶನ ಇರಲಿದೆ.  ಜೊತೆಗೆ ಚಿತ್ರದ ಟ್ರೇಲರ್ ನ್ನೂ YouTube channel Sainik Academy Mysuru ನಲ್ಲಿ ವೀಕ್ಷಿಸಬಹುದು, ಪೂರ್ತಿ ಚಲನ ಚಿತ್ರವನ್ನು ಇನ್ನೇನು ಕೆಲವೇ ದಿನಗಳಲ್ಲಿ ಮೇಲ್ಕಂಡ YouTube ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗುವುದು.

ಯೋಧರ ತ್ಯಾಗ, ಬಲಿದಾನ, ಶೌರ್ಯದ ಬಗ್ಗೆ ನಿರ್ಮಾಣ ಆಗಿರುವ ಕದನ ವೀರ ಚಲನ ಚಿತ್ರವನ್ನು  ಸೈನಿಕ ಅಕಾಡೆಮಿ (ರಿ) ಮೈಸೂರು ವತಿಯಿಂದ ನಿರ್ಮಾಣ ಮಾಡಲಾಗಿದೆ.  ಒಂದು ವರ್ಷಗಳ ಸತತ ಪ್ರಯತ್ನ ಪರಿಶ್ರಮದಿಂದ SAM ಸಂಸ್ಥಾಪಕರು ಮತ್ತು ಎಕ್ಸ್ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಶ್ರೀಧರ ಸಿ ಎಂ ರವರ ಪ್ರೋತ್ಸಾಹದಿಂದ, ಸೈನಿಕರ ಮೇಲೆ ಅಪಾರ ಅಭಿಮಾನ ಇರುವ SAM ನ ಅಭ್ಯರ್ಥಿ ಜೀವನ ಚಿಕ್ಕಬಂಡಾರ ಅವರ ನಿರ್ದೇಶನ ಹಾಗೂ ನಿರ್ಮಾಪಕ ಅನಿತಾ ಶ್ರೀಧರ ಅವರ ಸಹಕಾರದಿಂದ ಈ ಚಿತ್ರ ಮೂಡಿಬಂದಿದೆ.

ನನ್ನ ಮಣ್ಣು, ನನ್ನ ಜಲ, ನನ್ನ ಗಾಳಿ, ನನ್ನ ಜನ, ದೇಶ ಎಂಬ ಕಿಚ್ಚು ಯುವಪೀಳಿಗೆಗೆ, ಪೋಷಕರಿಗೆ ಹೆಚ್ಚಿಸಬೇಕೆಂಬ ಸೈನಿಕರ ತ್ಯಾಗ ಬಲಿದಾನ ಪ್ರತಿಯೊಬ್ಬರೂ ತಿಳಿಯಬೇಕು, ಸೈನಿಕರ ಸಾಹಸ ಸಾಧನೆಯು ಶಾಲೆಯ ಪಠ್ಯ ಪುಸ್ತಕಗಳಲ್ಲಿ ಪ್ರಕಟಿಸಬೇಕು, ತನಗಾಗಿ ಅಲ್ಲ, ತನ್ನವರಿಗಾಗಿ ಸೇವೆ ಮಾಡುತ್ತಿರುವ ಸೈನಿಕನಿಗೆ ಅಪಾರ ಗೌರವ ಸಿಗಬೇಕು, ಸೈನಿಕರಿಗೆ ಉತ್ಸಾಹ ಧೈರ್ಯ ಹೆಚ್ಚಿಸುವ ಕೆಲಸ ನಾವುಗಳು ಮಾಡಬೇಕೆಂಬ ಉದ್ದೇಶದಿಂದ ಈ ಚಲನ ಚಿತ್ರವನ್ನು SAM ಭವಿಷ್ಯದ ಸೈನಿಕರಿಂದಲೇ ನಿರ್ಮಿಸಲಾಗಿದೆ ಎಂದು ಚಿತ್ರತಂಡ ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

42 mins ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

1 hour ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

2 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

4 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

7 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

7 hours ago