Categories: Uncategorized

ಕದನ ವೀರ ಚಲನಚಿತ್ರಕ್ಕೆ ಶುಭ ಹಾರೈಸಿದ ರಾಜ್ಯಪಾಲ ವಿಜಯಶಂಕರ್‌, ಯದುವೀರ್

ಮೈಸೂರು: ಮೇಘಾಲಯ ರಾಜ್ಯಪಾಲರಾದ ಸಿ ಹೆಚ್ ವಿಜಯಶಂಕರ್ ಹಾಗೂ ಸಂಸದ ಯದುವೀರ್ ರ್ಯೋಧರ ತ್ಯಾಗ, ಬಲಿದಾನ ಹಾಗೂ ಶೌರ್ಯದ ಕುರಿತು ನಿರ್ಮಾಣವಾಗಿರುವ ಕದನ ವೀರ ಚಲನ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ
ಶುಭ ಹಾರೈಸಿದರು.

ಕದನ ವೀರ ಚಲನ ಚಿತ್ರ ಇದೆ 1ನೇ ಸೆಪ್ಟೆಂಬರ್ (ಭಾನುವಾರ) ಕರ್ನಾಟಕ ಕಲಾ ಮಂದಿರ ನಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ 5 ಪ್ರದರ್ಶನ ಇರಲಿದೆ.  ಜೊತೆಗೆ ಚಿತ್ರದ ಟ್ರೇಲರ್ ನ್ನೂ YouTube channel Sainik Academy Mysuru ನಲ್ಲಿ ವೀಕ್ಷಿಸಬಹುದು, ಪೂರ್ತಿ ಚಲನ ಚಿತ್ರವನ್ನು ಇನ್ನೇನು ಕೆಲವೇ ದಿನಗಳಲ್ಲಿ ಮೇಲ್ಕಂಡ YouTube ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗುವುದು.

ಯೋಧರ ತ್ಯಾಗ, ಬಲಿದಾನ, ಶೌರ್ಯದ ಬಗ್ಗೆ ನಿರ್ಮಾಣ ಆಗಿರುವ ಕದನ ವೀರ ಚಲನ ಚಿತ್ರವನ್ನು  ಸೈನಿಕ ಅಕಾಡೆಮಿ (ರಿ) ಮೈಸೂರು ವತಿಯಿಂದ ನಿರ್ಮಾಣ ಮಾಡಲಾಗಿದೆ.  ಒಂದು ವರ್ಷಗಳ ಸತತ ಪ್ರಯತ್ನ ಪರಿಶ್ರಮದಿಂದ SAM ಸಂಸ್ಥಾಪಕರು ಮತ್ತು ಎಕ್ಸ್ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಶ್ರೀಧರ ಸಿ ಎಂ ರವರ ಪ್ರೋತ್ಸಾಹದಿಂದ, ಸೈನಿಕರ ಮೇಲೆ ಅಪಾರ ಅಭಿಮಾನ ಇರುವ SAM ನ ಅಭ್ಯರ್ಥಿ ಜೀವನ ಚಿಕ್ಕಬಂಡಾರ ಅವರ ನಿರ್ದೇಶನ ಹಾಗೂ ನಿರ್ಮಾಪಕ ಅನಿತಾ ಶ್ರೀಧರ ಅವರ ಸಹಕಾರದಿಂದ ಈ ಚಿತ್ರ ಮೂಡಿಬಂದಿದೆ.

ನನ್ನ ಮಣ್ಣು, ನನ್ನ ಜಲ, ನನ್ನ ಗಾಳಿ, ನನ್ನ ಜನ, ದೇಶ ಎಂಬ ಕಿಚ್ಚು ಯುವಪೀಳಿಗೆಗೆ, ಪೋಷಕರಿಗೆ ಹೆಚ್ಚಿಸಬೇಕೆಂಬ ಸೈನಿಕರ ತ್ಯಾಗ ಬಲಿದಾನ ಪ್ರತಿಯೊಬ್ಬರೂ ತಿಳಿಯಬೇಕು, ಸೈನಿಕರ ಸಾಹಸ ಸಾಧನೆಯು ಶಾಲೆಯ ಪಠ್ಯ ಪುಸ್ತಕಗಳಲ್ಲಿ ಪ್ರಕಟಿಸಬೇಕು, ತನಗಾಗಿ ಅಲ್ಲ, ತನ್ನವರಿಗಾಗಿ ಸೇವೆ ಮಾಡುತ್ತಿರುವ ಸೈನಿಕನಿಗೆ ಅಪಾರ ಗೌರವ ಸಿಗಬೇಕು, ಸೈನಿಕರಿಗೆ ಉತ್ಸಾಹ ಧೈರ್ಯ ಹೆಚ್ಚಿಸುವ ಕೆಲಸ ನಾವುಗಳು ಮಾಡಬೇಕೆಂಬ ಉದ್ದೇಶದಿಂದ ಈ ಚಲನ ಚಿತ್ರವನ್ನು SAM ಭವಿಷ್ಯದ ಸೈನಿಕರಿಂದಲೇ ನಿರ್ಮಿಸಲಾಗಿದೆ ಎಂದು ಚಿತ್ರತಂಡ ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

10 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

11 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

21 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

21 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

21 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 hours ago