Categories: Uncategorized

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದಾಗಿ ನಿಗದಿಯಾಗಿದ್ದ ಮದುವೆ ಕಾರ್ಯಕ್ರಮ ಸ್ಥಗಿತಗೊಂಡಿದೆ.

ಕುಣಗಳ್ಳಿ ಗ್ರಾಮದ ನಿವಾಸಿ ಎಲ್. ರವೀಶ್ (34) ಅವರು ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್‌ನಲ್ಲಿ ಜ.30ರಂದು (ಇಂದು) ನಡೆಯಬೇಕಿದ್ದ ಆರತಕ್ಷತೆಗೆ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎಂಜಿಎಸ್‌ವಿ ಕಾಲೇಜು ರಸ್ತೆ ಬಳಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ, “ನೀನು ಮದ್ವೆ ಮನೆಗಲ್ಲ, ಸ್ಮಶಾನಕ್ಕೆ ತೆರಳಬೇಕು” ಎಂದು ಬೆದರಿಕೆ ಹಾಕಿ ಚಾಕು ಮತ್ತು ಡ್ರ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಲ್ಲಿ ರವೀಶ್ ಅವರ ಎಡಗೈ ತೋಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದ್ದು, ಸದ್ಯ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪ್ರೇಮ ಸಂಬಂಧದ ಶಂಕೆ
6 ತಿಂಗಳ ಹಿಂದೆಯಷ್ಟೇ ರವೀಶ್ ಅವರಿಗೆ ಹೊಸ ಅಣಗಳ್ಳಿ ಗ್ರಾಮದ ನಯನ ಎಂಬ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಧುವಿನ ಮಾಜಿ ಪ್ರೇಮಿ ಅಥವಾ ಸಂಬಂಧಿಕರೇ ಈ ದಾಳಿಗೆ ಕಾರಣರಾಗಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

12 mins ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

26 mins ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

43 mins ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

47 mins ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

1 hour ago

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…

1 hour ago