Father-in-law murdered by son-in-law: Wife and aunt-in-law arrested for aiding the murder.
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದಾಗಿ ನಿಗದಿಯಾಗಿದ್ದ ಮದುವೆ ಕಾರ್ಯಕ್ರಮ ಸ್ಥಗಿತಗೊಂಡಿದೆ.
ಕುಣಗಳ್ಳಿ ಗ್ರಾಮದ ನಿವಾಸಿ ಎಲ್. ರವೀಶ್ (34) ಅವರು ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ನಲ್ಲಿ ಜ.30ರಂದು (ಇಂದು) ನಡೆಯಬೇಕಿದ್ದ ಆರತಕ್ಷತೆಗೆ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎಂಜಿಎಸ್ವಿ ಕಾಲೇಜು ರಸ್ತೆ ಬಳಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ, “ನೀನು ಮದ್ವೆ ಮನೆಗಲ್ಲ, ಸ್ಮಶಾನಕ್ಕೆ ತೆರಳಬೇಕು” ಎಂದು ಬೆದರಿಕೆ ಹಾಕಿ ಚಾಕು ಮತ್ತು ಡ್ರ್ಯಾಗರ್ನಿಂದ ಹಲ್ಲೆ ನಡೆಸಿದ್ದಾರೆ.
ಹಲ್ಲೆಯಲ್ಲಿ ರವೀಶ್ ಅವರ ಎಡಗೈ ತೋಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದ್ದು, ಸದ್ಯ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಪ್ರೇಮ ಸಂಬಂಧದ ಶಂಕೆ
6 ತಿಂಗಳ ಹಿಂದೆಯಷ್ಟೇ ರವೀಶ್ ಅವರಿಗೆ ಹೊಸ ಅಣಗಳ್ಳಿ ಗ್ರಾಮದ ನಯನ ಎಂಬ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಧುವಿನ ಮಾಜಿ ಪ್ರೇಮಿ ಅಥವಾ ಸಂಬಂಧಿಕರೇ ಈ ದಾಳಿಗೆ ಕಾರಣರಾಗಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…