ಉತ್ತರಾಖಂಡ್: ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ.
ಉತ್ತರಾಖಂಡ್ದಲ್ಲಿ ಚಾರ್ ಧಾಮ್ ಯಾತ್ರೆ ಆರಂಭವಾದಾಗಿನಿಂದಲೂ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕೇದಾರನಾಥಕ್ಕೆ ಆಗಮಿಸುತ್ತಿದ್ದಾರೆ. ಇದೀಗ ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಗಾಂಧಿ ಸರೋವರ ಬೆಟ್ಟಗಳಿಂದ ಭಾರೀ ಮಳೆ ಸುರಿದಿದ್ದು, ಮುಂಜಾನೆ 5 ಗಂಟೆ ಸುಮಾರಿಗೆ ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ ಸಂಭವಿಸಿದೆ. ಇದರಿಂದ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತದಲ್ಲಿ ಬಿದ್ದ ಹಿಮವು ಹೆಚ್ಚಿನ ವೇಗದಲ್ಲಿ ಧಾವಿಸಿ ದೇವಸ್ಥಾನದ ಹಿಂದೆ ಇರುವ ಗಾಂಧಿ ಸರೋವರಕ್ಕೆ ಬಂದು ಬಿದ್ದಿದೆ. ಈ ಅವಘಡದಿಂದಾಗಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯ ಸಂಪೂರ್ಣ ಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…